ನವದೆಹಲಿ: ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಎನ್ವಿ ರಮಣ ಅವರನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇಮಕ ಮಾಡಿದ್ದಾರೆ. ಅವರು ಏಪ್ರಿಲ್ 24 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಕಳೆದ ತಿಂಗಳು, ಏಪ್ರಿಲ್ 23 ರಂದು ನಿವೃತ್ತರಾಗಲಿರುವ ಭಾರತದ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬಾಬ್ಡೆ, ನ್ಯಾಯಮೂರ್ತಿ ರಮಣ ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ಶಿಫಾರಸು ಮಾಡಿದ್ದರು.
ಆಗಸ್ಟ್ 27, 1957 ರಂದು ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯ ಕೃಷಿ ಕುಟುಂಬದಲ್ಲಿ ಜನಿಸಿದ ನ್ಯಾಯಮೂರ್ತಿ ರಮಣ ಅವರು 2022 ರ ಆಗಸ್ಟ್ 26 ರವರೆಗೆ ಒಂದು ವರ್ಷ ಮತ್ತು ನಾಲ್ಕು ತಿಂಗಳುಗಳ ಕಾಲ ದೇಶದ ಉನ್ನತ ನ್ಯಾಯಾಧೀಶರಾಗಲಿದ್ದಾರೆ.
ಅವರು ಆಂಧ್ರಪ್ರದೇಶದಿಂದ ಬಂದ ಭಾರತದ ಎರಡನೇ ಮುಖ್ಯ ನ್ಯಾಯಮೂರ್ತಿಯಾಗಲಿದ್ದಾರೆ, ಆಂಧ್ರದವರಾಗಿದ್ದ ನ್ಯಾಯಮೂರ್ತಿ ಕೆ ಸುಬ್ಬ ರಾವ್ ಅವರು 1966-67ರವರೆಗೆ ಭಾರತದ ಒಂಬತ್ತನೇ ಮುಖ್ಯ ನ್ಯಾಯಮೂರ್ತಿಯಾಗಿದ್ದರು.
ಸುಮಾರು ನಾಲ್ಕು ದಶಕಗಳ ಸುದೀರ್ಘ ವೃತ್ತಿಜೀವನದಲ್ಲಿ, ನ್ಯಾಯಮೂರ್ತಿ ರಮಣ “ಆಂಧ್ರಪ್ರದೇಶದ ಹೈಕೋರ್ಟ್, ಕೇಂದ್ರ ಮತ್ತು ಆಂಧ್ರಪ್ರದೇಶದ ಆಡಳಿತ ನ್ಯಾಯಮಂಡಳಿಗಳು ಮತ್ತು ಭಾರತದ ಸುಪ್ರೀಂ ಕೋರ್ಟ್ನಲ್ಲಿ ನಾಗರಿಕ, ಅಪರಾಧ, ಸಾಂವಿಧಾನಿಕ, ಕಾರ್ಮಿಕ, ಸೇವೆ ಮತ್ತು ಚುನಾವಣಾ ವಿಷಯಗಳಲ್ಲಿ ಪ್ರ್ಯಾಕ್ಟೀಸ್ ಮಾಡಿದ್ದಾರೆ. ಸುಪ್ರೀಂ ಕೋರ್ಟ್ನ ಅಧಿಕೃತ ವೆಬ್ಸೈಟ್ನಲ್ಲಿ ಅವರ ಪ್ರೊಫೈಲ್ ಪ್ರಕಾರ, ಸಾಂವಿಧಾನಿಕ, ಅಪರಾಧ, ಸೇವೆ ಮತ್ತು ಅಂತರರಾಜ್ಯ ನದಿ ಕಾನೂನುಗಳಲ್ಲಿ ಅವರು ಪರಿಣತಿ ಹೊಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.