ಕೋಲ್ಕತ್ತಾ: ವಿಧಾನಸಭಾ ಚುನಾವಣೆಯ ಅಖಾಡವಾಗಿರುವ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಹಿಂಸಾಚಾರ ತಾರಕಕ್ಕೇರುತ್ತಿದೆ. ತೃಣಮೂಲ ಕಾಂಗ್ರೆಸ್ ಪಕ್ಷದ ಗೂಂಡಾಗಳು ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ಬಿಜೆಪಿ ನಾಯಕ ಶಹನವಾಜ್ ಹುಸೇನ್ ಅವರ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ.
ಮಜಾಫರ್ ಚೌಕ್ನಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಟಿಎಂಸಿ ಕಾರ್ಯಕರ್ತರು ಅವರು ಮೇಲೆ ಕಲ್ಲು ಎಸೆದಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಶಹನವಾಜ್ ಹುಸೇನ್, “ಮುಜಾಫರ ಚೌಕ್ನಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಟಿಎಂಸಿ ಕಾರ್ಯಕರ್ತರು ನನ್ನ ಮೇಲೆ ಕಲ್ಲು ಎಸೆದಿದ್ದಾರೆ. ನಾನು ಘಟನೆಯ ಬಗ್ಗೆ ಪಕ್ಷದ ಕಾರ್ಯಕರ್ತರು ದೂರು ದಾಖಲಿಸಿದ್ದಾರೆ” ಎಂದಿದ್ದಾರೆ.
“ನಾನು ವೈ ಪ್ಲಸ್ ಸಿಆರ್ಪಿಎಫ್ ಭದ್ರತೆ ವ್ಯಾಪ್ತಿಗೆ ಒಳಪಟ್ಟಿದ್ದೇನೆ, ಅದರಂತೆ ಪೊಲೀಸ್ ಸಿಬ್ಬಂದಿಯನ್ನು ಯಾಕೆ ನಿಯೋಜಿಸಲಿಲ್ಲ ಎಂದು ಪೊಲೀಸ್ ಠಾಣೆಗೆ ತೆರಳಿ ವಿಚಾರಿಸಿದೆ. ಆದರೆ ಅವರ ಬಳಿ ಉತ್ತರವಿರಲಿಲ್ಲ” ಇಂದು ಹುಸೇನ್ ಹೇಳಿದ್ದಾರೆ.
ಸೋಲು ಖಚಿತ ಎಂದು ಅರಿವಾಗಿ ಟಿಎಂಸಿ ಹತಾಶೆಗೊಂಡಿದೆ ಎಂದು ಅವರು ಹೇಳಿದ್ದಾರೆ.
ಈಗಾಗಲೇ ಹಲವಾರು ಬಿಜೆಪಿ ನಾಯಕರ ಮೇಲೆ ಅಲ್ಲಿ ಕಲ್ಲುತೂರಾಟ, ಹಲ್ಲೆಯಂತಹ ಪ್ರಕರಣಗಳು ನಡೆದಿದೆ.
We will convert these stones into a lotus bloom!
BJP win in Bengal is now inevitable!@BJP4Bengal https://t.co/KLkAd1Aqcy pic.twitter.com/PWRvM49m0H— Syed Shahnawaz Hussain (@ShahnawazBJP) April 7, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.