ಗುವಾಹಟಿ: ಅಸ್ಸಾಂನ ಕೊಕ್ರಜಾರ್ ಜಿಲ್ಲೆಯಲ್ಲಿನ ರೈಲ್ವೇ ಹಳಿಯನ್ನು ಸ್ಫೋಟಿಸುವ ಕೆಎಲ್ಒ(ಕಮ್ಟಾಪುರ್ ಲಿಬರೇಶನ್ ಆರ್ಗನೈಸೇಶನ್)ಉಗ್ರರ ಪ್ರಯತ್ನವನ್ನು ಸೇನೆ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ವಿಫಲಗೊಳಿಸಿದ್ದಾರೆ.
ಕಾರ್ಯಾಚರಣೆಯ ವೇಳೆ ಉಗ್ರರ ಮತ್ತು ಸೇನೆ, ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಇದರಲ್ಲಿ ಒಬ್ಬ ಉಗ್ರ ಮೃತಪಟ್ಟಿದ್ದಾನೆ ಎಂದು ಮೂಲಗಳು ತಿಳಿಸಿವೆ.
ಕೊಕ್ರಜಾರ್ನ ರಭ ಪರ ಹಳ್ಳಿಯ ರೈಲ್ವೆ ಹಳಿಯ ಮೇಲೆ ಐಇಡಿ ಸ್ಫೋಟಕವನ್ನು ಇಡಲು ಉಗ್ರರು ಪ್ರಯತ್ನಿಸುತ್ತಿದ್ದರು. ಇದನ್ನು ತಡೆಯಲು ಮುಂದಾದ ಪೊಲೀಸರ ಮೇಲೆ ಗುಂಡು ಹಾರಿಸಿದ್ದಾರೆ. ಈ ವೇಳೆ ಗುಂಡಿನ ಚಕಮಕಿಗಳು ನಡೆದಿವೆ.
ಸ್ವಾತಂತ್ರ್ಯ ದಿನಾಚರಣೆ ಸಂಭ್ರಮವನ್ನು ಹಾಳುಗೆಡವುವ ಸಲುವಾಗಿ ಇವರು ರೈಲ್ವೇ ಹಳಿಯನ್ನು ಸ್ಫೋಟಿಸಲು ಮುಂದಾಗಿದ್ದರು ಎನ್ನಲಾಗಿದೆ. ಸ್ಥಳದಿಂದ ಎ7.65 ಎಂಎಂ ಪಿಸ್ತೂಲ್, ಪಿಸ್ತೂಲ್ ಮ್ಯಾಗಜೀನ್, ಇರಡು ಕೈ ಗ್ರೆನೆಡ್ಗಳು, 7 ಕೆಜಿ ಡಿಟೋನೇಟರನ್ನು ಒಳಗೊಂಡ ಐಇಡಿಯನ್ನು ವಶಪಡಿಸಿಕೊಳ್ಳಲಾಗಿದೆ,
ಜುಲೈಯಲ್ಲಿ ಕೆಎಲ್ಒ ಉಗ್ರನೊಬ್ಬನನ್ನು ಬಂಧನಕ್ಕೆ ಒಳಪಡಿಸಲಾಗಿತ್ತು,
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.