ನವದೆಹಲಿ : ಕೊರೋನಾ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ದೇಶದ 11 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಸಭೆ ನಡೆಸಿದರು.
ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಈ ಸಭೆಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ, ಇತರ ರಾಜ್ಯಗಳ ಮುಖ್ಯಮಂತ್ರಿಗಳೂ ತಮ್ಮ ತಮ್ಮ ರಾಜ್ಯಗಳ ಕೊರೋನಾ ಪರಿಸ್ಥಿತಿಗೆ ಸಂಬಂಧಿಸಿದಂತೆ ಪ್ರಧಾನಿ ಅವರಿಗೆ ಮಾಹಿತಿ ನೀಡಿದರು.
ದೇಶದಲ್ಲಿ ಲಾಕ್ಡನ್ ಅಗತ್ಯ ಇಲ್ಲ. ಆದರೆ ನೈಟ್ ಕರ್ಫ್ಯೂಗೆ ಆದ್ಯತೆ ನೀಡಬೇಕು. ದೇಶದಲ್ಲಿ 5% ಗಳಷ್ಟು ಕೊರೋನಾ ಪಾಸಿಟಿವ್ ಪ್ರಮಾಣ ಇಳಿಕೆಯಾಗುವ ನಿಟ್ಟಿನಲ್ಲಿ ಗಮನ ಹರಿಸಿ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ. ಮುಂದಿನ ಎರಡು ಮೂರು ವಾರಗಳ ವರೆಗೆ ಕಠಿಣ ನಿಯಮಗಳನ್ನು ಅನುಸರಿಸುವ ಅಗತ್ಯವಿದೆ ಎಂದು ಅವರು ನುಡಿದಿದ್ದಾರೆ.
ನಾಲ್ಕು ದಿನಗಳ ಕಾಲ ದೇಶದಲ್ಲಿ ವ್ಯಾಕ್ಸಿನ್ ಉತ್ಸವ ಮಾಡುವುದಕ್ಕೂ ಪ್ರಧಾನಿ.ಮೋದಿ ಕರೆ ಕೊಟ್ಟಿದ್ದಾರೆ. ಎಪ್ರಿಲ್ 11 – 14 ರ ವರೆಗೆ ವ್ಯಾಕ್ಸಿನ್ ಉತ್ಸವ ಮಾಡೋಣ. ಕೊರೋನಾ ಲಸಿಕೆ ಪಡೆಯಲು ಅರ್ಹರಿಗೆ ಸೂಚಿಸೋಣ. ಆ ಮೂಲಕ ಕೊರೋನಾ ನಿಯಂತ್ರಣ ಮಾಡೋಣ ಎಂದು ಅವರು ತಿಳಿಸಿದ್ದಾರೆ. ವ್ಯಾಕ್ಸಿನ್ ಬಗ್ಗೆ ತಪ್ಪು ತಿಳುವಳಿಕೆ ಬೇಡ ಎಂದು ಮೋದಿ ಹೇಳಿದ್ದಾರೆ. ಹಾಗೆಯೇ ಕೊರೋನಾ ಮುಂಜಾಗ್ರತಾ ಕ್ರಮಗಳಾದ ಮಾಸ್ಕ್ ಧರಿಸುವುದು ,ಸಾಮಾಜಿಕ ಅಂತರ ಕಾಪಾಡುವ ನಿಟ್ಟಿನಲ್ಲಿ ಆದ್ಯತೆ ನೀಡೋಣ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.