ಧಾಕಾ: ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ.ನರವಾನೆ ಅವರು 1,00,000 ಕೋವಿಡ್ -19 ಲಸಿಕೆ ಡೋಸ್ಗಳನ್ನು ಬಾಂಗ್ಲಾದೇಶದ ಸೇನಾ ಮುಖ್ಯಸ್ಥ ಜನರಲ್ ಅಜೀಜ್ ಅಹ್ಮದ್ ಅವರಿಗೆ ಹಸ್ತಾಂತರಿಸಿದರು.
ಕರೋನವೈರಸ್ ಸಾಂಕ್ರಾಮಿಕ ರೋಗವನ್ನು ನಿಭಾಯಿಸಲು ತಮ್ಮ ದೇಶಕ್ಕೆ ಸಹಾಯ ಮಾಡಿದ ಭಾರತಕ್ಕೆ ಜನರಲ್ ಅಹ್ಮದ್ ಅವರು ಧನ್ಯವಾದ ಅರ್ಪಿಸಿದರು.
ಜನರಲ್ ನರವಾನೆ ಅವರು ಜನರಲ್ ಅಹ್ಮದ್ ಅವರ ಆಹ್ವಾನದ ಮೇರೆಗೆ ಧಾಕಾಗೆ ಭೇಟಿ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೆರೆಯ ದೇಶಕ್ಕೆ ಪ್ರಯಾಣಿಸಿದ ಎರಡು ವಾರಗಳ ನಂತರ ಈ ಭೇಟಿ ನಡೆದಿದೆ.
ಸಬೆ ನಡೆಸಿದ ಇಬ್ಬರು ಜನರಲ್ಗಳು ಉಭಯ ದೇಶಗಳ ಸಶಸ್ತ್ರ ಪಡೆಗಳ ನಡುವಿನ ಉತ್ತಮ ಸಂಬಂಧ ಮತ್ತು ಭವಿಷ್ಯದಲ್ಲಿ ಪರಸ್ಪರ ಸಹಕಾರಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಿದರು.
ಐದು ದಿನಗಳ ಭೇಟಿಗಾಗಿ ಬಾಂಗ್ಲಾಗೆ ತೆರಳಿರುವ ನರವಾನೆ ಅವರು, 1971 ರ ಬಾಂಗ್ಲಾದೇಶ ವಿಮೋಚನಾ ಯುದ್ಧದ ಹುತಾತ್ಮರಿಗೆ ಗೌರವ ಸಲ್ಲಿಸಿದರು. ಅವರ ಭೇಟಿಯು ಉಭಯ ರಾಷ್ಟ್ರಗಳ ಸಶಸ್ತ್ರ ಪಡೆಗಳ ನಡುವೆ ಇರುವ ನಿಕಟ ಸಂಬಂಧವನ್ನು ಇನ್ನಷ್ಟು ಬಲಪಡಿಸುವ ಗುರಿಯನ್ನು ಹೊಂದಿದೆ.
2021 ರ ವರ್ಷ ಭಾರತ-ಬಾಂಗ್ಲಾದೇಶದ ರಾಜತಾಂತ್ರಿಕ ಸಂಬಂಧಗಳ 50 ನೇ ವರ್ಷಾಚರಣೆಯಾಗಿದೆ, ಪಾಕಿಸ್ಥಾನದಿಂದ ಬಾಂಗ್ಲಾದೇಶದ ವಿಮೋಚನೆ ಮತ್ತು ‘ಬಂಗಬಂಧು’ ಶೇಖ್ ಮುಜಿಬುರ್ ರಹಮಾನ್ ಅವರ ಜನ್ಮ ಶತಮಾನೋತ್ಸವವನ್ನು ಕೂಡ ಸೂಚಿಸುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.