ನವದೆಹಲಿ: ಮಳೆಗಾಲದ ಅಧಿವೇಶನವನ್ನು ಹಾಳುಗೆಡವಿದ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿರುವ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ದೇಶವನ್ನು ಉಳಿಸಲು ಪ್ರಯತ್ನಿಸುತ್ತಿದ್ದರೆ, ಕಾಂಗ್ರೆಸ್ ಒಂದು ಕುಟುಂಬವನ್ನು ಉಳಿಸಲು ಪ್ರಯತ್ನಿಸುತ್ತಿದೆ ಎಂದಿದ್ದಾರೆ.
ದೇಶದಲ್ಲಿ ನಡೆಯುತ್ತಿರುವ ತೀವ್ರಗತಿಯ ಅಭಿವೃದ್ಧಿ ಕಾಂಗ್ರೆಸನ್ನು ಹತಾಶಗೊಳಿಸಿದೆ, ಹೀಗಾಗಿ ಅಧಿವೇಶನದಲ್ಲಿ ಮಸೂದೆಗಳು ಜಾರಿಯಾಗದಂತೆ ಅದು ತಡೆಯೊಡ್ಡುತ್ತಿದೆ. ಆದರೆ ಬಿಜೆಪಿ ಈ ದೇಶದ ಬಡವರ, ಕೆಳವರ್ಗದ ಜನರ ಕಲ್ಯಾಣಕ್ಕೆ ಕಟಿಬದ್ಧವಾಗಿದೆ ಎಂದಿದ್ದಾರೆ.
ಇಡೀ ಅಧಿಕಾರ ಒಂದು ಕುಟುಂಬದಲ್ಲಿ ಕೇಂದ್ರೀಕೃತವಾಗಿರಬೇಕೆಂದು ಬಯಸುತ್ತಿರುವ ಕಾಂಗ್ರೆಸ್ನ ವರ್ತನೆ ತುರ್ತು ಪರಿಸ್ಥಿತಿಯನ್ನು ನೆನಪಿಸುತ್ತಿದೆ ಎಂದಿರುವ ಅವರು, ಕಾಂಗ್ರೆಸ್ನ ಬಂಡವಾಳವನ್ನು ಜನರ ಮುಂದೆ ತೆರೆದಿಡುವಂತೆ ಸಂಸದರಿಗೆ ಕರೆ ನೀಡಿದ್ದಾರೆ.
‘ಕಾಂಗ್ರೆಸ್ನ ಈ ಪ್ರಜಾಪ್ರಭುತ್ವ ವಿರೋಧಿ ಸವಾಲನ್ನು ನಾವು ಸ್ವೀಕರಿಸುತ್ತೇವೆ ಮತ್ತು ಅದನ್ನು ಜನರ ಬಳಿಗೆ ತೆಗೆದುಕೊಂಡು ಹೋಗುತ್ತೇವೆ, ದೇಶದ ಪ್ರಗತಿಗೆ ತಡೆಯೊಡ್ಡುತ್ತಿರುವ ಕಾಂಗ್ರೆಸ್ ಮುಖವನ್ನು ಬಹಿರಂಗಪಡಿಸಲು ನಮ್ಮ ಜನ ದೇಶದ ಮೂಲೆ ಮೂಲೆಗೂ ಹೋಗಲಿದ್ದಾರೆ, ಕಾಂಗ್ರೆಸ್ ಕುಟುಂಬವನ್ನು ರಕ್ಷಿಸಲು ಪ್ರಯತ್ನಿಸುತ್ತಿದೆ. ಬಿಜೆಪಿ ಈ ದೇಶವನ್ನು ರಕ್ಷಿಸಲು ಪ್ರಯತ್ನಿಸುತ್ತಿದೆ’ ಎಂದರು.
ಅಲ್ಲದೇ ಕಾಂಗ್ರೆಸ್ ಮತ್ತು ಎಡಪಕ್ಷಗಳ ವಿರುದ್ಧ ದೇಶಾದ್ಯಂತ ಹೋರಾಟ ನಡೆಸುವಂತೆ ಪಕ್ಷದ ಸಚಿವರುಗಳಿಗೆ ಮತ್ತು ಸಂಸದರಿಗೆ ಅವರು ಕರೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.