ನವದೆಹಲಿ: ಇಂದು ಮಹಾತ್ಮ ಜ್ಯೋತಿಬಾ ಫುಲೆ ಅವರ ಜನ್ಮದಿನವನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಅವರಿಗೆ ಗೌರವ ಸಲ್ಲಿಸಿದರು.
ಮಹಾತ್ಮ ಫುಲೆ ಅವರನ್ನು ಶ್ರೇಷ್ಠ ಸಮಾಜ ಸುಧಾರಕ, ಚಿಂತಕ, ದಾರ್ಶನಿಕ ಮತ್ತು ಬರಹಗಾರ ಎಂದು ಬಣ್ಣಿಸಿರುವ ಮೋದಿ, ಅವರು ತಮ್ಮ ಜೀವನದುದ್ದಕ್ಕೂ ಮಹಿಳೆಯರಿಗೆ ಶಿಕ್ಷಣ ಮತ್ತು ಸಬಲೀಕರಣ ನೀಡುವ ಉದ್ದೇಶಕ್ಕೆ ಬದ್ಧರಾಗಿದ್ದರು ಎಂದು ಹೇಳಿದ್ದಾರೆ.
ಮಹಾತ್ಮ ಫುಲೆ ಅವರ ಸಮರ್ಪಣೆ ಮತ್ತು ಸಾಮಾಜಿಕ ಸುಧಾರಣೆಯ ಬದ್ಧತೆಯು ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ ಎಂದು ಪ್ರಧಾನಿ ಹೇಳಿದ್ದಾರೆ.
ಮಹಾನ್ ಚಿಂತಕ, ಸಮಾಜ ಸುಧಾರಕ ಮತ್ತು ಲೇಖಕ ಜ್ಯೋತಿರಾವ್ ಗೋವಿಂದರಾವ್ ಫುಲೆ ಅವರ ಜನ್ಮ ವಾರ್ಷಿಕೋತ್ಸವದಂದು ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್ ಅವರಿಗೆ ಗೌರವ ಸಲ್ಲಿಸಿದರು. ದೇಶದಲ್ಲಿ ಮಹಿಳೆಯರಿಗಾಗಿ ಮೊದಲ ಶಾಲೆಯನ್ನು ಪ್ರಾರಂಭಿಸಿದ ಕೀರ್ತಿಗೆ ಪಾತ್ರರಾದ ಮಹಾತ್ಮ ಫುಲೆ ಅವರು ಭಾರತೀಯ ಸಮಾಜದಲ್ಲಿ ಜಾತಿ ಆಧಾರಿತ ವಿಭಜನೆ ಮತ್ತು ತಾರತಮ್ಯವನ್ನು ಕೊನೆಗೊಳಿಸುವಲ್ಲಿ ಗಮನಾರ್ಹ ಕೊಡುಗೆ ನೀಡಿದ್ದಾರೆ ಎಂದು ಜಾವಡೇಕರ್ ಹೇಳಿದ್ದಾರೆ.
महान समाजसेवी, विचारक, दार्शनिक एवं लेखक महात्मा ज्योतिबा फुले की जयंती पर उन्हें कोटि-कोटि नमन। वे जीवनपर्यंत महिलाओं की शिक्षा और उनके सशक्तिकरण के लिए प्रतिबद्ध रहे। समाज सुधार के प्रति उनकी निष्ठा आने वाली पीढ़ियों को प्रेरित करती रहेगी।
— Narendra Modi (@narendramodi) April 11, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.