ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಉಗ್ರರ ಹಡೆಮುರಿ ಕಟ್ಟು ಕಾಯಕವನ್ನು ನಿರಂತರವಾಗಿ ಮಾಡುತ್ತಿವೆ. ಮೊನ್ನೆಯಷ್ಟೇ ಒಂದೇ ದಿನ 7 ಉಗ್ರರನ್ನು ಸಂಹಾರ ಮಾಡಿದ್ದಭದ್ರತಾ ಪಡೆಗಳು, ಇದೀಗ ಮತ್ತೆ ಮೂವರು ಉಗ್ರರನ್ನು ಇಹಲೋಕ ತ್ಯಜಿಸುವಂತೆ ಮಾಡಿವೆ.
ಶೋಪಿಯಾನ್ ಜಿಲ್ಲೆಯಲ್ಲಿ ಮತ್ತೆ ಎನ್ ಕೌಂಟರ್ ನಡೆದಿದ್ದು, ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಎನ್ ಕೌಂಟರ್ ನಲ್ಲಿ ಮೂವರು ಅಪರಿಚಿತ ಭಯೋತ್ಪಾದಕರು ಸಂಹರಿಸಲ್ಪಟ್ಟಿದ್ದಾರೆ.
ಶೋಪಿಯಾನ್ ಜಿಲ್ಲೆಯ ಹಡಿಪೊರದಲ್ಲಿ ಎನ್ ಕೌಂಟರ್ ಈಗಲೂ ಮುಂದುವರೆದಿದೆ ಎಂದು ಮೂಲಗಳು ತಿಳಿಸಿವೆ. ಹೆಚ್ಚಿನ ವಿವರ ತಿಳಿದುಬಂದಿಲ್ಲ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.
ಉಗ್ರಗಾಮಿ ಸಂಘಟನೆಗೆ ಹೊಸದಾಗಿ ಸೇರಿದ ಯುವಕರನ್ನು ಎನ್ ಕೌಂಟರ್ ಆರಂಭದಲ್ಲಿ ಪ್ರಾಮಾಣಿಕವಾಗಿ ಶರಣಾಗುವಂತೆ ಪೊಲೀಸರು ಕೇಳಿಕೊಂಡಿದ್ದಾರೆ. ಒಬ್ಬ ಉಗ್ರನ ಪೋಷಕರು ಕೂಡ ಮನವಿ ಮಾಡಿಕೊಂಡಿದ್ದರೂ ಆತ ಯಾರ ಮಾತನ್ನೂ ಕೇಳಲಿಲ್ಲ, ಬೇರೆ ಉಗ್ರರು ಆತನನ್ನು ಶರಣಾಗಲು ಬಿಡಲಿಲ್ಲ, ಹೀಗಾಗಿ ಪೊಲೀಸರು ಆತನನ್ನು ಹತ್ಯೆ ಹಾಕಿದರು ಎಂದು ತಿಳಿದುಬಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.