ಬೀದರ್: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಬೀಸಲು ಆರಂಭವಾಗಿದ್ದು, ಜನರು ಸಹಕರಿಸದೇ ಹೋದಲ್ಲಿ ಲಾಕ್ಡೌನ್ ಹೇರಿಕೆ ಅನಿವಾರ್ಯವಾಗಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ರಾಜ್ಯ ರಾಜಧಾನಿ ಬೆಂಗಳೂರು ನಗರ ಸೇರಿದಂತೆ ಇನ್ನಿತರ ಜಿಲ್ಲೆಗಳಲ್ಲಿ ಕೊರೋನಾ ಸೋಂಕು ವ್ಯಾಪಿಸುವ ತೀವ್ರತೆ ಹೆಚ್ಚುತ್ತಿದೆ. ಈ ಅಂಶವನ್ನು ಗಮನದಲ್ಲಿರಿಸಿಕೊಂಡು ಜನರು ಅನಿವಾರ್ಯ ಸಂದರ್ಭದಲ್ಲಿ ಮಾತ್ರವೇ ಮನೆಯಿಂದ ಹೊರ ಹೋಗುವಂತೆ ಸಿಎಂ ಸೂಚಿಸಿದ್ದಾರೆ. ಜನಜಂಗುಳಿ ಸೇರಬಾರದು. ಸಾಮಾಜಿಕ ಅಂತರ ಕಾಪಾಡುವುದು, ಮಾಸ್ಕ್ ಧರಿಸುವುದು ಮೊದಲಾದ ಅಗತ್ಯ ಕ್ರಮಗಳನ್ನು ವಹಿಸುವಂತೆಯೂ ಅವರು ತಿಳಿಸಿದ್ದಾರೆ.
ಕೊರೋನಾ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗೂ ಅಗತ್ಯ ಮಾತುಕತೆ ನಡೆಸಲಾಗಿದೆ. ಹೆಚ್ಚು ಕೊರೋನಾ ಪ್ರಕರಣಗಳು ದಾಖಲಾಗಿರುವ ಕಡೆಗಳಲ್ಲಿ ನೈಟ್ ಕರ್ಫ್ಯೂ ಹೇರಲಾಗಿದೆ. ಸರ್ಕಾರ ಜಾರಿಗೊಳಿಸಿರುವ ಕೊರೋನಾ ನಿಯಂತ್ರಣ ಕ್ರಮಗಳ ಬಗ್ಗೆ ಜನರು ಅಸಡ್ಡೆ ತೋರದೆ ಸಹಕರಿಸುವಂತೆಯೂ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.