ಬೆಂಗಳೂರು: ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಈಗಾಗಲೇ ಬಿಜೆಪಿ ಪರವಾದ ಅಲೆ ಇದೆ. 25 ಸಾವಿರಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಬಿಜೆಪಿ ಗೆಲ್ಲಲಿದೆ. ಯಾವುದೇ ಅನುಮಾನದ ಅಗತ್ಯ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್ಕುಮಾರ್ ಕಟೀಲ್ ಅವರು ತಿಳಿಸಿದರು.
ಮಸ್ಕಿಯಲ್ಲಿ ಸೋಮವಾರ ನಡೆದ ಬೂತ್ ಸಮಿತಿ ಅಧ್ಯಕ್ಷರ, ಮಹಾಶಕ್ತಿ ಕೇಂದ್ರ ಹಾಗೂ ಪೇಜ್ ಪ್ರಮುಖರ ಸಭೆಯಲ್ಲಿ ಮಾತನಾಡಿದ ಅವರು, ಇನ್ನೂ ಹೆಚ್ಚಿನ ಮತ ತರುವಲ್ಲಿ ಬೂತ್ ಅಧ್ಯಕ್ಷರು, ಶಕ್ತಿ ಕೇಂದ್ರ ಹಾಗೂ ಪೇಜ್ ಪ್ರಮುಖರು ಶ್ರಮಿಸುವ ಮೂಲಕ ಮಸ್ಕಿ ಉಪ ಚುನಾವಣೆ ಫಲಿತಾಂಶ ಇತಿಹಾಸದ ಪುಟಗಳಲ್ಲಿ ದಾಖಲೆಯಾಗಬೇಕು ಎಂದು ತಿಳಿಸಿದರು.
ಈ ಉಪಚುನಾವಣೆಯ ಫಲಿತಾಂಶ ಮೇ 2 ರಂದು ಪ್ರಕಟವಾಗಲಿದ್ದು, ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರು ಮಸ್ಕಿ ಕಡೆ ಮುಖ ಹಾಕದಂತೆ ಫಲಿತಾಂಶ ದಾಖಲಾಗಬೇಕು ಎಂದು ಹೇಳಿದರು.
ಪ್ರತಿ ಮತಗಟ್ಟೆಯ ಬೂತ್ ಅಧ್ಯಕ್ಷರು, ಪೇಜ್ ಪ್ರಮುಖ ಹಾಗೂ ಪಂಚ ರತ್ನ ಸಮಿತಿಗಳ ಮುಖಂಡರು ಪ್ರತಿಯೊಬ್ಬರ ಮತಗಳು ಬಿಜೆಪಿಗೇ ಬರುವಂತೆ ನೋಡಿಕೊಳ್ಳಬೇಕು ಎಂದರು.
ಈ ಕ್ಷೇತ್ರದಲ್ಲಿ ಕಾಂಗ್ರೆಸ್ ತಳ ಹಂತಕ್ಕೆ ಕುಸಿದಿದೆ. ಕಾಂಗ್ರೆಸ್ ಅಭ್ಯರ್ಥಿ ಪರ ಯಾವುದೇ ಅಲೆ ಇಲ್ಲ. ಕಾಂಗ್ರೆಸ್ ಮುಖಂಡರು ಸುಮ್ಮನೆ ಸುಳ್ಳು ಪ್ರಚಾರ ನಡೆಸಿದ್ದಾರೆ ಎಂದು ತಿಳಿಸಿದರು.
ಪಕ್ಷದ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಅರುಣ್ ಕುಮಾರ್, ಪಕ್ಷದ ಉಪಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ, ಕಂದಾಯ ಸಚಿವರಾದ ಆರ್. ಅಶೋಕ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಎನ್ ರವಿಕುಮಾರ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರಾಮಾನಂದ ಯಾದವ್, ಶಾಸಕರಾದ ಪರಣ್ಣ ಮನವಳ್ಳಿ, ಕೃಷ್ಣಪ್ಪ, ಮಾಜಿ ಶಾಸಕರಾದ ನೇಮಿರಾಜ ನಾಯ್ಕ, ಮಂಡಲ ಅಧ್ಯಕ್ಷರಾದ ಶಿವಪುತ್ರಪ್ಪ ಅರಳಹಳ್ಳಿ ಮುಖಂಡರು ಭಾಗವಹಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.