ನವದೆಹಲಿ: ದೇಶದಲ್ಲಿ ಎಂಎಸ್ಎಂಇ ಕ್ಷೇತ್ರದ ಉನ್ನತಿಗಾಗಿ ಸರ್ಕಾರ ಬದ್ಧವಾಗಿದೆ ಎಂದು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಆರ್ಥಿಕತೆಯಲ್ಲಿ ಎಂಎಸ್ಎಂಇ ಕೈಗಾರಿಕೆಗಳ ಕೊಡುಗೆಯನ್ನು ಹೆಚ್ಚಿಸಲು, ರಫ್ತು ಸಾಮರ್ಥ್ಯ ಮತ್ತು ಈ ವಲಯದಲ್ಲಿ ಉದ್ಯೋಗ ಸೃಷ್ಟಿಗೆ ಅನುಕೂಲವಾಗುವಂತೆ ಸರ್ಕಾರ ಹಲವಾರು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ.ಈ ಕ್ರಮಗಳು ಈ ವಲಯದಲ್ಲಿ ಐದು ಕೋಟಿ ಉದ್ಯೋಗವನ್ನು ಸೃಷ್ಟಿಸುತ್ತವೆ ಎಂದು ಅವರು ಹೇಳಿದ್ದಾರೆ.
ಎಂಎಸ್ಎಂಇಗಳ ಡಿಜಿಟಲೀಕರಣಕ್ಕೆ ಸಂಬಂಧಿಸಿದ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಆರ್ಥಿಕತೆಯಲ್ಲಿ ಎಂಎಸ್ಎಂಇ ಕ್ಷೇತ್ರದ ಒಟ್ಟಾರೆ ಕೊಡುಗೆಯನ್ನು ಮುಂಬರುವ ವರ್ಷಗಳಲ್ಲಿ ಈಗಿನ 30 ಪ್ರತಿಶತದಿಂದ 40 ಪ್ರತಿಶತಕ್ಕೆ ಹೆಚ್ಚಿಸಲಾಗುವುದು ಎಂದು ಭರವಸೆ ವ್ಯಕ್ತಪಡಿಸಿದರು.
ಎಂಎಸ್ಎಂಇ ಉದ್ಯಮಗಳಿಂದ ರಫ್ತು ಹೆಚ್ಚಿಸುವ ಕಾರ್ಯಗಳು ಪ್ರಗತಿಯಲ್ಲಿವೆ ಎಂದು ಅವರು ಹೇಳಿದ್ದಾರೆ.
ಎಂಎಸ್ಎಂಇ ವಲಯದಲ್ಲಿ ಡಿಜಿಟಲೀಕರಣದ ಮಹತ್ವವನ್ನು ತಿಳಿಸಿದ ಗಡ್ಕರಿ, ಡಿಜಿಟಲೀಕರಣದ ಮೂಲಕ ವ್ಯವಸ್ಥೆಗಳನ್ನು ಪಾರದರ್ಶಕ, ಸಮಯಕ್ಕೆ ಅನುಗುಣವಾಗಿ ಮತ್ತು ಫಲಿತಾಂಶ ಆಧಾರಿತವಾಗಿಸಬಹುದು. ಇ-ಮಾರುಕಟ್ಟೆ ಭಾರತದ ಭವಿಷ್ಯ ಮತ್ತು ಮಾರ್ಕೆಟಿಂಗ್, ಉತ್ಪಾದನಾ ಪ್ರಕ್ರಿಯೆ ಮತ್ತು ಆಡಳಿತದಲ್ಲಿ ಡಿಜಿಟಲೀಕರಣವು ಈ ವಲಯವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಬಹುದು ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.