ಅಮೃತಸರ: ಏಪ್ರಿಲ್ 13 ಜಲಿಯನ್ವಾಲಾ ಬಾಗ್ ಹತ್ಯಾಕಾಂಡದ ದಿನವಾಗಿದೆ. ಸ್ವಾತಂತ್ರ್ಯ ಸಂಗ್ರಾಮದ ಸಂದರ್ಭದಲ್ಲಿ ನಡೆದ ಅತ್ಯಂತ ಅಮಾನವೀಯ ಘಟನೆಗಳಲ್ಲಿ ಇದು ಒಂದಾಗಿದೆ.
ಜಲಿಯನ್ ವಾಲಾ ಬಾಗ್ ಹತ್ಯಾಕಾಂಡವು ಭಾರತಕ್ಕೆ ಅತ್ಯಂತ ಹೃದಯ ಕಲಕುವ ಐತಿಹಾಸಿಕ ಘಟನೆಗಳಲ್ಲಿ ಒಂದಾಗಿದೆ, ಬ್ರಿಟಿಷ್ ಅಧಿಕಾರಿಗಳು ಬೈಸಾಖಿಯ ಸಂದರ್ಭವನ್ನು ಆಚರಿಸಲು ನೆರೆದಿದ್ದ ಸಾವಿರಾರು ಜನರ ಮೇಲೆ ಗುಂಡು ಹಾರಿಸಿ ಹತ್ಯಾಕಾಂಡವನ್ನೇ ನಡೆಸಿದ್ದರು.
ಏಪ್ರಿಲ್ 13, 1919 ರಂದು ಬೈಸಖಿಯ ಸಂದರ್ಭದಲ್ಲಿ ಜನರು ಜಲಿಯನ್ ವಾಲಾ ಬಾಗ್ನಲ್ಲಿ ಜಮಾಯಿಸಿದ್ದರು, ಬ್ರಿಗೇಡಿಯರ್-ಜನರಲ್ ರೆಜಿನಾಲ್ಡ್ ಡೈಯರ್ ತಮ್ಮ ಅಧಿಕಾರಿಗಳಿಗೆ ನಿರಾಯುಧ ಭಾರತೀಯ ನಾಗರಿಕರ ಮೇಲೆ ಗುಂಡು ಹಾರಿಸಲು ಆದೇಶಿಸಿದ. ಇದರಲ್ಲಿ ಅಧಿಕೃತ ದಾಖಲೆಗಳ ಪ್ರಕಾರ 350 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡರು ಮತ್ತು ಸಾವಿರಾರು ಜನರು ಗಾಯಗೊಂಡರು.
ಈ ಘಟನೆಗೆ ಭಾರತದ ಇತಿಹಾಸದಲ್ಲಿ ಬಹಳ ಮಹತ್ವದ ಸ್ಥಾನ ನೀಡಲಾಗಿದೆ, ಇದು ಭಾರತದ ರಾಷ್ಟ್ರೀಯ ಸ್ವಾತಂತ್ರ್ಯ ಚಳವಳಿಯ ಪ್ರಮುಖ ತಿರುವು ಎಂದೇ ಬಿಂಬಿತವಾಗಿದೆ.
ಜಲಿಯನ್ವಾಲಾ ಬಾಗ್ ಹತ್ಯಾಕಾಂಡವನ್ನು ಪ್ರಧಾನಿ ಮೋದಿ ಇಂದು ಸ್ಮರಿಸಿದ್ದು, ಹುತಾತ್ಮರಿಗೆ ನಮನ ಸಲ್ಲಿಸಿದ್ದಾರೆ.
ಟ್ವಿಟ್ ಮಾಡಿರುವ ಅವರು, “ಜಲಿಯನ್ವಾಲಾ ಬಾಗ್ ಹತ್ಯಾಕಾಂಡದಲ್ಲಿ ಹುತಾತ್ಮರಾದವರಿಗೆ ಗೌರವ ನಮನ. ಅವರ ಧೈರ್ಯ, ಶೌರ್ಯ ಮತ್ತು ತ್ಯಾಗ ಪ್ರತಿಯೊಬ್ಬ ಭಾರತೀಯನಿಗೂ ಶಕ್ತಿ ನೀಡುತ್ತದೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.