News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಡಾ.ಬಿಆರ್‌ ಅಂಬೇಡ್ಕರ್‌ ಜಯಂತಿ: ರಾಷ್ಟ್ರಪತಿ, ಪ್ರಧಾನಿಯಿಂದ ಗೌರವ ನಮನ

ನವದೆಹಲಿ: ಸಂವಿಧಾನ ಶಿಲ್ಪಿ, ದೇಶಕಂಡ ಮಹಾನಾಯಕ ಡಾ.ಬಿಆರ್‌ ಅಂಬೇಡ್ಕರ್‌ ಅವರ 130 ನೇ ಜಯಂತಿಯನ್ನು ಇಂದು ಆಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಸೇರಿದಂತೆ ಅನೇಕ ಗಣ್ಯರು ಭಾರತದ ಸಂವಿಧಾನದ ಶಿಲ್ಪಿ ಭೀಮರಾವ್ ರಾಮ್‌ಜಿ ಅಂಬೇಡ್ಕರ್ ಅವರಿಗೆ ಗೌರವ ನಮನ ಸಲ್ಲಿಕೆ ಮಾಡಿದ್ದಾರೆ.

ರಾಷ್ಟ್ರಪತಿ  ಟ್ವಿಟ್‌ ಮಾಡಿ, “ಭಾರತದ ಸಂವಿಧಾನ ಶಿಲ್ಪಿ ಡಾ.ಭೀಮರಾವ್ ರಾಮ್ಜಿ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯಂದು, ನನ್ನ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಎಲ್ಲಾ ನಾಗರಿಕರಿಗೆ ಶುಭಾಶಯಗಳನ್ನು ತಿಳಿಸುತ್ತೇನೆ” ಎಂದು ಹೇಳಿದ್ದಾರೆ.

“ಸ್ಪೂರ್ತಿದಾಯಕ ಜೀವನದ ಮೂಲಕ ಡಾ. ಅಂಬೇಡ್ಕರ್ ಅವರು ತಮ್ಮ ಅನನ್ಯ ಹಾದಿಯನ್ನು ತೀವ್ರ ಪ್ರತಿಕೂಲತೆಯ ಮಧ್ಯೆ ಗಟ್ಟಿ ಮಾಡಿದರು ಮತ್ತು ಅಸಾಧಾರಣ ಮತ್ತು ಬಹುಮುಖಿ ಸಾಧನೆಗಳಿಗಾಗಿ ಪ್ರಶಂಸೆಯನ್ನು ಗಳಿಸಿದ್ದಾರೆ” ಎಂದಿದ್ದಾರೆ.

“ಭಾರತ ರತ್ನ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಜನ್ಮ ವಾರ್ಷಿಕೋತ್ಸವದಂದು ಶತ ಶತ ನಮನಗಳು. ಸಮಾಜದ ವಂಚಿತ ವರ್ಗಗಳನ್ನು ಮುಖ್ಯವಾಹಿನಿಗೆ ತರುವ ಅವರ ಹೋರಾಟವು ಪ್ರತಿ ಪೀಳಿಗೆಗೆ ಒಂದು ಉದಾಹರಣೆಯಾಗಿ ಮುಂದುವರಿಯುತ್ತದೆ. ನಾನು  ಡಾ. ಅಂಬೇಡ್ಕರ್ ಜಯಂತಿಯಂದು ಮಹಾನ್‌ ವ್ಯಕ್ತಿತ್ವ ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ಶಿರಭಾಗುತ್ತೇನೆ” ಎಂದಿದ್ದಾರೆ.

 

 

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top