News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮೈಕ್ರೋಸಾಫ್ಟ್ ಜೊತೆ ಕೃಷಿ ಸಚಿವಾಲಯ ಮಹತ್ವದ ಒಪ್ಪಂದ: ರೈತ ಆದಾಯ ಹೆಚ್ಚಳದ ಗುರಿ

ನವದೆಹಲಿ:  ಆರು ರಾಜ್ಯಗಳ 100 ಹಳ್ಳಿಗಳಲ್ಲಿ ಪ್ರಾಯೋಗಿಕ ಯೋಜನೆಗಾಗಿ ಕೇಂದ್ರ ಕೃಷಿ ಸಚಿವಾಲಯ ಮೈಕ್ರೋಸಾಫ್ಟ್ ಜೊತೆ ಒಪ್ಪಂದ ಮಾಡಿಕೊಂಡಿದೆ. ಈ ಯೋಜನೆಯು ಆಯ್ದ ಹಳ್ಳಿಗಳಲ್ಲಿನ ರೈತರ ಸುಧಾರಣೆಗಾಗಿ ವಿವಿಧ ಕಾರ್ಯಗಳನ್ನು ನಿರ್ವಹಿಸಲಿದ್ದು, ಇದು ಅವರ ಆದಾಯವನ್ನು ಹೆಚ್ಚಿಸುತ್ತದೆ. ಇದು ರೈತರ ಫಸಲಿಗೆ ಮಾಡುವ ವೆಚ್ಚವನ್ನು ಕಡಿಮೆ ಮಾಡುತ್ತದೆ ಮತ್ತು ಬೇಸಾಯವನ್ನು ಸುಲಭಗೊಳಿಸುತ್ತದೆ.

ಉತ್ತರ ಪ್ರದೇಶ, ಮಧ್ಯಪ್ರದೇಶ, ಗುಜರಾತ್, ಹರಿಯಾಣ, ರಾಜಸ್ಥಾನ ಮತ್ತು ಆಂಧ್ರಪ್ರದೇಶಗಳನ್ನು ಇದಕ್ಕಾಗಿ ಆಯ್ಕೆ ಮಾಡಲಾಗಿದೆ.  ನಂತರದ ನಿರ್ವಹಣೆ ಮತ್ತು ವಿತರಣೆ ಸೇರಿದಂತೆ ಸ್ಮಾರ್ಟ್ ಮತ್ತು ಸುಸಂಘಟಿತ ಕೃಷಿಗೆ ಮೈಕ್ರೋಸಾಫ್ಟ್ ರೈತ ಇಂಟರ್ಫೇಸ್ ಅನ್ನು ಅಭಿವೃದ್ಧಿಪಡಿಸಲಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಡಿಜಿಟಲ್ ಕೃಷಿ ಕುರಿತು ಪ್ರಧಾನಿ ನರೇಂದ್ರ ಮೋದಿಯವರ ಕಲ್ಪನೆ ಈಗ ರೂಪುಗೊಳ್ಳುತ್ತಿದೆ ಎಂದಿದ್ದಾರೆ.

ಅವರು, 2014 ರಲ್ಲಿ ಪ್ರಧಾನ ಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿನಿಂದ ಮೋದಿ, ರೈತರ ಆದಾಯವನ್ನು ಹೆಚ್ಚಿಸಲು ಕೃಷಿ ಕ್ಷೇತ್ರದಲ್ಲಿ ಆಧುನಿಕ ತಂತ್ರಜ್ಞಾನಗಳ ಬಳಕೆಗೆ  ಹೆಚ್ಚಿನ ಒತ್ತು ನೀಡಿದ್ದಾರೆ. ಕೃಷಿ ಆರ್ಥಿಕತೆಯು ದೇಶದ ಬೆನ್ನೆಲುಬಾಗಿದೆ ಮತ್ತು ಕೃಷಿಗೆ ಯಾವುದೇ ನಷ್ಟವು ದೇಶಕ್ಕೆ ನಷ್ಟವಾಗಿದೆ ಎಂದು ಅವರು ಹೇಳಿದ್ದಾರೆ.

ಕೊರೋನಾ ಸಾಂಕ್ರಾಮಿಕದಂತಹ ಪ್ರತಿಕೂಲ ಪರಿಸ್ಥಿತಿಗಳಲ್ಲೂ ಕೃಷಿ ಕ್ಷೇತ್ರವು ದೇಶದ ಆರ್ಥಿಕತೆಗೆ ಸಕಾರಾತ್ಮಕ ಕೊಡುಗೆ ನೀಡಿದೆ ಎಂದು  ತೋಮರ್ ಹೇಳಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top