News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಪರಿಶಿಷ್ಟ ಜಾತಿಗಳಿಗಾಗಿ ಆನ್‌ಲೈನ್ ಕುಂದುಕೊರತೆ ನಿರ್ವಹಣಾ ಪೋರ್ಟಲ್ ಆರಂಭ

ನವದೆಹಲಿ: ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗದ ಆನ್‌ಲೈನ್ ಕುಂದುಕೊರತೆ ನಿರ್ವಹಣಾ ಪೋರ್ಟಲ್ ಅನ್ನು ನಿನ್ನೆ ಪ್ರಾರಂಭಿಸಿದ್ದಾರೆ. ಪ್ರಸ್ತುತ ಪರಿಶಿಷ್ಟ ಜಾತಿಯ  ಸಂತ್ರಸ್ಥರ ದೂರುಗಳನ್ನು ಆಯೋಗದಲ್ಲಿ ಮ್ಯಾನುವಲ್‌ ಆಗಿ ಪ್ರಕ್ರಿಯೆಗೊಳಿಸಲಾಗುತ್ತದೆ. ಹೀಗಾಗಿ ಇದೀಗ ಆನ್‌ಲೈನ್ ಮೋಡ್‌ನಲ್ಲಿ ದೂರುಗಳನ್ನು ನಿರ್ವಹಿಸಲು ಹೊಸ ಕಾರ್ಯವಿಧಾನವನ್ನು ಪರಿಚಯಿಸಲಾಗಿದೆ.

ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗವು ಪರಿಶಿಷ್ಟ ಜಾತಿಗಳ ಶೋಷಣೆಯ ವಿರುದ್ಧ ಸುರಕ್ಷತೆಗಳನ್ನು ಒದಗಿಸುವ ಉದ್ದೇಶದಿಂದ ಸ್ಥಾಪಿಸಲಾದ ಭಾರತೀಯ ಸಾಂವಿಧಾನಿಕ ಸಂಸ್ಥೆಯಾಗಿದೆ.

ಪೋರ್ಟಲ್ ಉದ್ಘಾಟಿಸಿ ಮಾತನಾಡಿದ  ಪ್ರಸಾದ್, ಆನ್‌ಲೈನ್ ಕುಂದುಕೊರತೆ ನಿರ್ವಹಣಾ ಪೋರ್ಟಲ್ ಅನ್ನು ಪ್ರಾರಂಭಿಸುವುದು ವಿಶೇಷವಾಗಿ ಮಹತ್ವದ್ದಾಗಿದೆ, ಏಕೆಂದರೆ ಇಂದು ರಾಷ್ಟ್ರವು ಭಾರತದ ಶ್ರೇಷ್ಠ ನಾಯಕ ಡಾ.ಬಿ.ಆರ್ ಅಂಬೇಡ್ಕರ್‌ ಅವರ ಜನ್ಮ ವಾರ್ಷಿಕೋತ್ಸವವನ್ನು ಆಚರಿಸುತ್ತಿದೆ. ಡಾ.ಅಂಬೇಡ್ಕರ್ ಅವರು ಸಮಾಜದ  ದೀನ ದಲಿತ ವರ್ಗಗಳ ಉನ್ನತಿಗೆ ಕೆಲಸ ಮಾಡಿದ್ದಾರೆ ಎಂದಿದ್ದಾರೆ.

ಡಿಜಿಟಲ್ ಇಂಡಿಯಾ ದೇಶದಲ್ಲಿ ಬೃಹತ್ ಆಂದೋಲನವಾಗಬೇಕಿದೆ ಎಂದು ಸಚಿವರು ಅಭಿಪ್ರಾಯಪಟ್ಟಿದ್ದಾರೆ.

ಸಭೆಯನ್ನುದ್ದೇಶಿಸಿ ಮಾತನಾಡಿದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ರತ್ತನ್ ಲಾಲ್ ಕಟಾರಿಯಾ, ಪರಿಶಿಷ್ಟ ಜಾತಿಯ ಜನರಿಗೆ ದೇಶದ ಯಾವುದೇ ಭಾಗದಿಂದ ತಮ್ಮ ದೂರನ್ನು ನೋಂದಾಯಿಸಲು ಪೋರ್ಟಲ್ ಅನುವು ಮಾಡಿಕೊಡಲಿದೆ ಎಂದು ಹೇಳಿದರು. ತಮ್ಮ ಅರ್ಜಿಯನ್ನು ಮತ್ತು ಇತರ ದೌರ್ಜನ್ಯ ಮತ್ತು ಸೇವೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳನ್ನು ಆನ್‌ಲೈನ್‌ನಲ್ಲಿ ಸಲ್ಲಿಸಲು ಮತ್ತು ಸಮಯಕ್ಕೆ ತಕ್ಕಂತೆ ಅವುಗಳನ್ನು ಪರಿಹರಿಸಲು ಪೋರ್ಟಲ್ ಸಹಾಯ ಮಾಡುತ್ತದೆ ಎಂದು ಅವರು ಹೇಳಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top