ನವದೆಹಲಿ: ದೇಶದಲ್ಲಿ ವೈದ್ಯಕೀಯ ಆಮ್ಲಜನಕಕ್ಕೆ ಬೇಡಿಕೆ ಹೆಚ್ಚುತ್ತಿದೆ. ಹೀಗಾಗಿ ಆಮ್ಲಜನಕದ ಕೊರತೆ ಸೃಷ್ಟಿಯಾಗುವ ಆತಂಕ ಜನರಲ್ಲಿ ಸಹಜವಾಗಿಯೇ ಮೂಡಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ , “ದೇಶದಲ್ಲಿ ಸಾಕಷ್ಟು ಪ್ರಮಾಣದ ಆಮ್ಲಜನಕ ಸಂಗ್ರಹವಿದೆ, ಪ್ರಸ್ತುತ ಆಮ್ಲಜನಕದ ದಾಸ್ತಾನು ದೇಶದಲ್ಲಿ 50 ಸಾವಿರ ಮೆಟ್ರಿಕ್ ಟನ್ಗಿಂತ ಹೆಚ್ಚಿನದಾಗಿದೆ” ಎಂದು ತಿಳಿಸಿದೆ.
ದೇಶದ ದೈನಂದಿನ ಆಮ್ಲಜನಕದ ಉತ್ಪಾದನಾ ಸಾಮರ್ಥ್ಯ ಏಳು ಸಾವಿರ ಮೆಟ್ರಿಕ್ ಟನ್ಗಳಿಗಿಂತ ಹೆಚ್ಚಿನದಾಗಿದೆ ಮತ್ತು ಉತ್ಪಾದನಾ ಸಾಮರ್ಥ್ಯವು ಮತ್ತಷ್ಟು ಹೆಚ್ಚಾಗುತ್ತಿದೆ ಎಂದು ಅದು ತಿಳಿಸಿದೆ.
ಹೆಚ್ಚುತ್ತಿರುವ ಬೇಡಿಕೆಗಳನ್ನು ಈಡೇರಿಸಲು ವೈದ್ಯಕೀಯ ಆಮ್ಲಜನಕವನ್ನು ತರ್ಕಬದ್ಧವಾಗಿ ಬಳಸಿಕೊಳ್ಳುವಂತೆ ಮತ್ತು ವ್ಯರ್ಥವಾಗುವುದನ್ನು ತಪ್ಪಿಸಲು ಕೇಂದ್ರ ಸರ್ಕಾರ ರಾಜ್ಯಗಳಿಗೆ ಮನವಿ ಮಾಡಿಕೊಂಡಿದೆ.
ವೈದ್ಯಕೀಯ ಆಮ್ಲಜನಕದ ಸಾಕಷ್ಟು ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಎಂಪವರ್ಡ್ ಗ್ರೂಪ್ ಸಹ ಕ್ರಮವನ್ನು ಪ್ರಾರಂಭಿಸಿದೆ. ಉಕ್ಕಿನ ಸ್ಥಾವರಗಳಲ್ಲಿ ಲಭ್ಯವಿರುವ ಹೆಚ್ಚುವರಿ ಆಮ್ಲಜನಕವನ್ನು ಸಹ ಅಗತ್ಯಕ್ಕೆ ತಕ್ಕಂತೆ ಬಳಸಿಕೊಳ್ಳಲಾಗುತ್ತಿದೆ ಎಂದು ಸರ್ಕಾರ ಭರವಸೆ ನೀಡಿದೆ. ಜಿಲ್ಲೆಗಳಿಗೆ ಆಮ್ಲಜನಕವನ್ನು ಸುಗಮವಾಗಿ ಪೂರೈಸಲು ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲು ರಾಜ್ಯಗಳಿಗೆ ಸೂಚಿಸಲಾಗಿದೆ.
ವಿವಿಧ ಪೀಡಿತ ರಾಜ್ಯಗಳಿಗೆ ವೈದ್ಯಕೀಯ ಆಮ್ಲಜನಕದ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಹಲವಾರು ಕ್ರಮಗಳನ್ನು ಪ್ರಾರಂಭಿಸಿದೆ. ವೈದ್ಯಕೀಯ ಆಮ್ಲಜನಕದ ಉತ್ಪಾದನೆಯನ್ನು ಹೆಚ್ಚಿಸಲು, ಉಕ್ಕಿನ ಸ್ಥಾವರಗಳಲ್ಲಿ ಲಭ್ಯವಿರುವ ಹೆಚ್ಚುವರಿ ದಾಸ್ತಾನುಗಳ ಬಳಕೆ ಮತ್ತು ರಾಜ್ಯಗಳ ಅವಶ್ಯಕತೆಗಳನ್ನು ಆಮ್ಲಜನಕ ಮೂಲಗಳೊಂದಿಗೆ ಮ್ಯಾಪಿಂಗ್ ಮಾಡಲು ಕ್ರಮ ಕೈಗೊಳ್ಳಲಾಗಿದೆ.
ಮಹಾರಾಷ್ಟ್ರ, ಗುಜರಾತ್, ಮಧ್ಯಪ್ರದೇಶ, ಉತ್ತರ ಪ್ರದೇಶ, ದೆಹಲಿಯಂತಹ ಆಮ್ಲಜನಕದ ಹೆಚ್ಚಿನ ಅಗತ್ಯವಿರುವ ರಾಜ್ಯಗಳೊಂದಿಗೆ ಹೆಚ್ಚುವರಿ ಪೂರೈಕೆಯನ್ನು ತಯಾರಕರು, ರಾಜ್ಯಗಳೊಂದಿಗೆ ಸಮಾಲೋಚಿಸಿ ಪೂರೈಕೆಯಾಗುವಂತೆ ನೋಡಿಕೊಳ್ಳಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.