ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಎಲ್ಲಾ ವಿಕಲ ಚೇತನರಿಗೂ ಕೊರೋನಾ ಲಸಿಕೆ ನೀಡಲು ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಅಂಗವಿಕಲರ ರಕ್ಷಣಾ ಸಮಿತಿ ಸರ್ಕಾರಕ್ಕೆ ಮನವಿ ಮಾಡಿದೆ.
ಈ ಸಂಬಂಧ ಸಮಿತಿಯ ಅಧ್ಯಕ್ಷ ಚಂದ್ರಶೇಖರ್ ಪುಟ್ಟಪ್ಪ ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಆಯುಕ್ತರಿಗೆ ಪತ್ರ ಬರೆದಿದ್ದು, ಕೊರೋನಾ ಲಸಿಕೆ ಅಭಿಯಾನದಡಿ ಬೌದ್ಧಿಕ ಹಾಗೂ ದೈಹಿಕ ವಿಕಲತೆಗಳನ್ನು ಒಳಗೊಂಡಿರುವ 45 ವರ್ಷಗಳ ಒಳಗಿನವರಿಗೂ ಕೊರೋನಾ ಲಸಿಕೆ ವಿತರಣೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.
ವಿಕಲ ಚೇತನರಿಗೆ ಕೊರೋನಾ ಬಂದಲ್ಲಿ ಅದರಿಂದಾಗುವ ಅಪಾಯ ಹೆಚ್ಚು. ಇದರಿಂದ ಚೇತರಿಸಿಕೊಳ್ಳುವಿಕೆ ಅವರಿಗೆ ಸವಾಲಾಗಿ ಪರಿಣಮಿಸುವ ಸಾಧ್ಯತೆ ಇದೆ. ಆದ್ದರಿಂದ ವಿಕಲ ಚೇತನರ ಹಕ್ಕುಗಳ ಕಾಯ್ದೆ ಪ್ರಕಾರ ಅವರಿಗೆ ಸೂಕ್ತ ಆರೋಗ್ಯ ಭದ್ರತೆ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆಯೂ ಪತ್ರದಲ್ಲಿ ತಿಳಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.