ಬೆಂಗಳೂರು: ಕೋವಿಡ್ ಸಂಕಷ್ಟದ ನಡುವೆಯೂ ಭಾರತವು ವಿಶ್ವದ ಪ್ರಮುಖ ರಾಷ್ಟ್ರವಾಗಿ ಹೊರಹೊಮ್ಮಿದೆ. ಕೇಂದ್ರ ಸರಕಾರದ ವಿಶ್ವವಂದ್ಯ ನಾಯಕರು ಮತ್ತು ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಅವರ ದೂರದೃಷ್ಟಿಯೇ ಇದಕ್ಕೆ ಕಾರಣ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ದೇವೇಂದ್ರ ಫಡ್ನವಿಸ್ ಅವರು ತಿಳಿಸಿದರು.
ಬೆಳಗಾವಿಯಲ್ಲಿ ಇಂದು ಬಿಜೆಪಿ ಅಭ್ಯರ್ಥಿ ಶ್ರೀಮತಿ ಮಂಗಳಾ ಅಂಗಡಿ ಅವರ ಪರವಾಗಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ಬೆಳಗಾವಿಯಲ್ಲಿ ಗೆಲುವು ಸಾಧಿಸಲಿದ್ದಾರೆ. ದಿವಂಗತ ಸುರೇಶ್ ಅಂಗಡಿ ಅವರ ಅಭಿವೃದ್ಧಿ ಕಾರ್ಯಗಳನ್ನು ಗಮನಿಸಿ ಮತ್ತು ರಾಜ್ಯದಲ್ಲಿನ ಜನಪರ ಕಾರ್ಯಕ್ರಮಗಳನ್ನು ಬೆಂಬಲಿಸಿ ಬಿಜೆಪಿಯನ್ನು ಗೆಲ್ಲಿಸಲಿದ್ದಾರೆ ಎಂದು ನುಡಿದರು.
ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ ಜೋಷಿ, ರಾಜ್ಯಸಭಾ ಸದಸ್ಯರು ಮತ್ತು ರಾಜ್ಯ ರೈತ ಮೋರ್ಚಾ ಅಧ್ಯಕ್ಷರಾದ ಶ್ರೀ ಈರಣ್ಣ ಕಡಾಡಿ, ರಾಜ್ಯದ ಸಚಿವರಾದ ಶ್ರೀ ಜಗದೀಶ್ ಶೆಟ್ಟರ್, ಶ್ರೀ ಉಮೇಶ್ ಕತ್ತಿ, ಶಾಸಕರಾದ ಶ್ರೀ ಅಭಯ್ ಪಾಟೀಲ್, ಶ್ರೀ ಅನಿಲ್ ಬೆನಕೆ, ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಶ್ರೀ ಸಂಜಯ್ ಪಾಟೀಲ್, ಬಿಜೆಪಿ ಅಭ್ಯರ್ಥಿ ಶ್ರೀಮತಿ ಮಂಗಳಾ ಅಂಗಡಿ, ಮುಖಂಡರು ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.