ಬೆಂಗಳೂರು : ಮಸ್ಕಿ ನಗರದ ಸೋಮನಾಥ ನಗರದ ಎರಡನೇ ವಾರ್ಡ್ನಲ್ಲಿ ಕಾಂಗ್ರೆಸ್ ಪರವಾಗಿ ಮನೆ ಮನೆಗೆ ಹಣ ಹಂಚಲಾಗುತ್ತಿದೆ ಪ್ರತಿ ಮತಕ್ಕೆ 2000 ರೂ ನೀಡಲಾಗುತ್ತಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಮತ್ತು ವಿಧಾನಪರಿಷತ್ ಸದಸ್ಯರಾದ ಎನ್. ರವಿಕುಮಾರ್ ಅವರು ತಿಳಿಸಿದರು.
ಮಸ್ಕಿಯಲ್ಲಿ ಇಂದು ಕಾಂಗ್ರೆಸ್ ಹಣ ಹಂಚುವ ಸಂಬಂಧ ವಿಡಿಯೋವನ್ನು ಪತ್ರಕರ್ತರಿಗೆ ಬಿಡುಗಡೆ ಮಾಡಿ ಅವರು ಮಾತನಾಡಿದರು. ಕಾಂಗ್ರೆಸ್ ಹಣ ಹಂಚುತ್ತಿರುವ ಮೂರು ವಿಡಿಯೋಗಳನ್ನು ತಾವು ಈಗಾಗಲೇ ಬಿಡುಗಡೆ ಗೊಳಿಸಿದ್ದು. ಚುನಾವಣಾ ಅಧಿಕಾರಿಯು ಈ ಕುರಿತು ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದರು.
ಮಸ್ಕಿಯಲ್ಲಿ ಬಿಜೆಪಿ ಹಣ ಹಂಚುತ್ತಿದೆ ಎಂಬ ಕಾಂಗ್ರೆಸ್ ಮುಖಂಡರ ಆರೋಪಗಳನ್ನು ಅಲ್ಲಗಳೆದ ಅವರು, ಕೆ.ಪಿ.ಸಿ.ಸಿ. ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ಮೂಟೆಗಟ್ಟಲೆ ಹಣ ತಂದು ಹಂಚುವ ಕಾರ್ಯ ನಡೆಸುತ್ತಿದ್ದಾರೆ. ಕಾರಿನಲ್ಲಿ ಅಥವಾ ಹೆಲಿಕಾಪ್ಟರ್ನಲ್ಲಿ ಹಣ ತಂದಿರಬಹುದು. ಈ ಕುರಿತು ಸಮಗ್ರ ತನಿಖೆ ಅಗತ್ಯ ಎಂದು ಒತ್ತಾಯಿಸಿದರು.
ತುರ್ರುವಿಹಾಳದಿಂದಲೂ ಹಣ ಹಂಚಲು ಕಾಂಗ್ರೆಸ್ ಕಾರ್ಯಕರ್ತರು ಬಂದಿದ್ದಾರೆ. ಹಣ ಹಂಚುತ್ತಿರುವ ಕಾರ್ಯಕರ್ತರು ಮತ್ತು ಕೆ.ಪಿ.ಸಿ.ಸಿ. ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ದೂರು ದಾಖಲಿಸಿ ಕ್ರಮ ಕೈಗೊಳ್ಳಬೇಕೆಂದು ರವಿಕುಮಾರ್ ಅವರು ಆಗ್ರಹಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.