ನವದೆಹಲಿ: ಭಾರತದಲ್ಲಿ ಕೊರೋನಾ ಸೋಂಕುಗಳ ಹೆಚ್ಚಳವನ್ನು ತಡೆಗಟ್ಟುವ ಕ್ರಮವಾಗಿ ಹೇರಲಾದ ನಿರ್ಬಂಧಗಳ ಹಿನ್ನೆಲೆಯಲ್ಲಿ ಅಗತ್ಯ ವಸ್ತುಗಳ ಸುಗಮ ಮತ್ತು ಪರಿಣಾಮಕಾರಿ ಪೂರೈಕೆಯನ್ನು ಖಾತ್ರಿಪಡಿಸಿಕೊಳ್ಳುವಂತೆ ಕೇಂದ್ರವು ಗುರುವಾರ ದೇಶದ ಎಲ್ಲಾ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿದೆ.
ನಿರ್ಬಂಧಿತ ಪ್ರದೇಶಗಳ ಹೊರಗಡೆ ಇರುವ ಕಿರಾಣಿ ಅಂಗಡಿಗಳು, ಕೆಮಿಷ್ಟ್, ಔಷಧಾಲಯ ಮತ್ತು ದಿನಸಿ ಗೋದಾಮುಗಳು ಯಾವುದೇ ವ್ಯತ್ಯಾಸಗಳಿಲ್ಲದೆ ಕಾರ್ಯನಿರ್ವಹಿಸುತ್ತಿವೆ, ಔಷಧಗಳು ಮತ್ತು ನೈರ್ಮಲ್ಯ ಉತ್ಪನ್ನಗಳ ಪೂರೈಕೆ ಸಮರ್ಪಕವಾಗಿದೆ ಎಂದು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರವು ರಾಜ್ಯಗಳಿಗೆ ಮತ್ತು ಕೇಂದ್ರಾಡಳಿತ ಪ್ರದೇಶದ ಅಧಿಕಾರಿಗಳಿಗೆ ಪತ್ರ ಬರೆದಿದೆ.
ಗ್ರಾಹಕ ವ್ಯವಹಾರಗಳ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ನಿಧಿ ಖರೆ ಈ ಬಗ್ಗೆ ಮಾಹಿತಿ ನೀಡಿ, ಎಲ್ಲಾ ರಾಜ್ಯಗಳು ಮತ್ತು ಯುಟಿಗಳ ಪ್ರಧಾನ ಕಾರ್ಯದರ್ಶಿಗಳಿಗೆ ಬರೆದಿರುವ ಪತ್ರದಲ್ಲಿ, ದೇಶದಲ್ಲಿ ಕೋವಿಡ್ -19 ಪ್ರಕರಣಗಳ ಸಂಖ್ಯೆಯಲ್ಲಿ ಹಠಾತ್ ಏರಿಕೆಯಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಲಾಗಿದೆದ್ದು, ದೇಶದಲ್ಲಿ ನ್ಯಾಯಯುತ ಬೆಲೆಯಲ್ಲಿ ಅಗತ್ಯ ವಸ್ತುಗಳ ಲಭ್ಯತೆಯನ್ನು ಖಚಿತಪಡಿಸುವಂತೆ ಸೂಚಿಸಲಾಗಿದೆ ಎಂದಿದ್ದಾರೆ.
“ಕಚ್ಚಾ ವಸ್ತುಗಳ ಬೆಲೆಗಳು ಮತ್ತು ವಿನಿಮಯ ದರಗಳ ಏರಿಳಿತದ ಕಾರಣದಿಂದಾಗಿ ವೆಚ್ಚ ಹೆಚ್ಚಳ ಅನಿವಾರ್ಯವಲ್ಲದ ಹೊರತು, ಎಲ್ಲಾ ಅಗತ್ಯ ಸಾಮಗ್ರಿಗಳ ಬೆಲೆಗಳು ಹೆಚ್ಚಾಗುವುದಿಲ್ಲ ಮತ್ತು ಅವುಗಳು ನ್ಯಾಯಯುತ ಬೆಲೆಯಲ್ಲಿ ಲಭ್ಯವಿವೆ ಎಂದು ಖಚಿತಪಡಿಸಿಕೊಳ್ಳಬೇಕು” ಎಂದು ಪತ್ರದಲ್ಲಿ ತಿಳಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.