ನವದೆಹಲಿ: ದೇಶದಾದ್ಯಂತ ಕೊರೋನಾವೈರಸ್ ಸಾಂಕ್ರಾಮಿಕ ರೋಗ ಅಕ್ಷರಶಃ ತಾಂಡವಾಡುತ್ತಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ತೀವ್ರಗತಿಯಲ್ಲಿ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ ಹರಿದ್ವಾರದಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳವನ್ನು ಕೇವಲ ಸಾಂಕೇತಿಕವಾಗಿ ಆಚರಿಸಬೇಕಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ಇಂದು ಬೆಳಿಗ್ಗೆ ಮನವಿ ಮಾಡಿರುವ ಮೋದಿ, ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಟವನ್ನು ಬಲಿಷ್ಠಗೊಳಿಸಲು ಕುಂಭಮೇಳವನ್ನು ಸಾಂಕೇತಿಕವಾಗಿ ಆಚರಣೆ ಮಾಡಬೇಕಾಗಿದೆ ಎಂದಿದ್ದಾರೆ.
“ಎರಡು ಶಾಹಿ ಸ್ನಾನಗಳು ನಡೆದಿವೆ ಮತ್ತು ಕರೋನಾದ ಬಿಕ್ಕಟ್ಟಿನಿಂದಾಗಿ ಕುಂಭವನ್ನು ಸಾಂಕೇತಿಕವಾಗಿರಿಸಬೇಕೆಂದು ನಾನು ಪ್ರಾರ್ಥಿಸುತ್ತೇನೆ. ಈ ಬಿಕ್ಕಟ್ಟಿನ ವಿರುದ್ಧದ ಹೋರಾಟಕ್ಕೆ ಇದು ಒಂದು ಬಲವನ್ನು ನೀಡುತ್ತದೆ” ಎಂದಿದ್ದಾರೆ.
“ಆಚಾರ್ಯ ಮಹಾಮಂಡಲೇಶ್ವರ ಪೂಜ್ಯ ಸ್ವಾಮಿ ಅವಧೇಶನಂದ್ ಗಿರಿ ಜಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದೆ, ಎಲ್ಲಾ ಸಂತರ ಆರೋಗ್ಯದ ಬಗ್ಗೆ ವಿಚಾರಿಸಿದೆ. ಎಲ್ಲಾ ಸಂತರು ಆಡಳಿತಕ್ಕೆ ಎಲ್ಲಾ ರೀತಿಯ ಬೆಂಬಲವನ್ನು ನೀಡುತ್ತಿದ್ದಾರೆ. ಇದಕ್ಕಾಗಿ ನಾನು ಸಂತ ಜಗತ್ತಿಗೆ ಧನ್ಯವಾದ ಅರ್ಪಿಸುತ್ತೇನೆ” ಎಂದಿದ್ದಾರೆ.
ಟ್ವೀಟ್ ಮಾಡಿರುವ ಪ್ರಧಾನಮಂತ್ರಿ ಅವರು, ಹಿಂದೂ ಧರ್ಮ ಆಚಾರ್ಯ ಸಭಾ ಅಧ್ಯಕ್ಷ ಸ್ವಾಮಿ ಅವಧೇಶಾನಂದ್ ಗಿರಿ ಜಿ ಮಹಾರಾಜ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದಾಗಿ ಮತ್ತು ಪ್ರತಿವರ್ಷ ಸಾವಿರಾರು ಭಕ್ತರನ್ನು ಆಕರ್ಷಿಸುವ ವಾರ್ಷಿಕ ಸಭೆಯ ಬಗ್ಗೆ ಮನವಿ ಮಾಡಿದ್ದಾಗಿ ಹೇಳಿಕೊಂಡಿದ್ದಾರೆ.
ಈಗಾಗಲೇ ಕುಂಭಮೇಳದಲ್ಲಿ ಭಾಗಿಯಾದ ಸಾವಿರಾರು ಮಂದಿಗೆ ಕೋವಿಡ್ ಬಂದಿದೆ ಎಂದು ವರದಿಗಳು ತಿಳಿಸಿವೆ. ಹೀಗಾಗಿ ಕುಂಭಮೇಳವನ್ನು ಕೇವಲ ಸಾಂಕೇತಿಕವಾಗಿ ಆಚರಿಸುವಂತೆ ಪ್ರಧಾನಿ ಮೋದಿ ಮಾಡಿರುವ ಕರೆ ಹೆಚ್ಚು ಸೂಕ್ತವಾಗಿದೆ.
मैंने प्रार्थना की है कि दो शाही स्नान हो चुके हैं और अब कुंभ को कोरोना के संकट के चलते प्रतीकात्मक ही रखा जाए। इससे इस संकट से लड़ाई को एक ताकत मिलेगी। @AvdheshanandG
— Narendra Modi (@narendramodi) April 17, 2021
आचार्य महामंडलेश्वर पूज्य स्वामी अवधेशानंद गिरि जी से आज फोन पर बात की। सभी संतों के स्वास्थ्य का हाल जाना। सभी संतगण प्रशासन को हर प्रकार का सहयोग कर रहे हैं। मैंने इसके लिए संत जगत का आभार व्यक्त किया।
— Narendra Modi (@narendramodi) April 17, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.