ನವದೆಹಲಿ: ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಅವರು ರಾಮಾಯಣದ ಮೊದಲ ಆನ್ಲೈನ್ ಪ್ರದರ್ಶನವನ್ನು ಉದ್ಘಾಟಿಸಿದ್ದಾರೆ. ಆನ್ಲೈನ್ ಪ್ರದರ್ಶನಕ್ಕಾಗಿ ವೆಬ್ಲಿಂಕ್ www.nmvirtual.in/Virtual_Tour/Ramayanಗೆ ಭೇಟಿ ನೀಡಬಹುದು.
ಪಟೇಲ್ ಅವರು ನಿನ್ನೆ 2021 ರ ವಿಶ್ವ ಪರಂಪರೆಯ ದಿನಾಚರಣೆಯ ಸಂದರ್ಭದಲ್ಲಿ ‘ಇಂಡಿಯಾಸ್ ಹೆರಿಟೇಜ್: ಪವರ್ ಟೂರಿಸಂ’ ಎಂಬ ವೆಬ್ನಾರ್ ಅನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಉದ್ಘಾಟನೆಗೊಂಡ ಆನ್ಲೈನ್ ಪ್ರದರ್ಶನವು ನವದೆಹಲಿಯ ನ್ಯಾಷನಲ್ ಮ್ಯೂಸಿಯಂನಲ್ಲಿನ ಭಾರತದ ವಿವಿಧ ಕಲಾ ಶಾಲೆಗಳ 49 ಮಿನಿ ವರ್ಣಚಿತ್ರಗಳ ಸಂಗ್ರಹಗಳನ್ನು ಪ್ರದರ್ಶಿಸುತ್ತದೆ.
ಈ ಸಂದರ್ಭದಲ್ಲಿ ಮಾತನಾಡಿದ ಪಟೇಲ್, ಭಾರತವು ದೇವಾಲಯಗಳು, ನೃತ್ಯ, ಸಂಗೀತ, ಶಾಸ್ತ್ರಗಳ ವಿಶಿಷ್ಟ ಪರಂಪರೆಯನ್ನು ಹೊಂದಿದೆ, ಅದನ್ನು ವಿಶ್ವದ ಎಲ್ಲಿಯೂ ಕಾಣಲಾಗುವುದಿಲ್ಲ. ಭವಿಷ್ಯದ ಪೀಳಿಗೆಗೆ ಈ ಅಮೂಲ್ಯವಾದ ಪರಂಪರೆಯನ್ನು ರಕ್ಷಿಸುವುದು ಸಾಮೂಹಿಕ ಜವಾಬ್ದಾರಿಯಾಗಿದೆ ಮತ್ತು ಸಮುದಾಯದ ಭಾಗವಹಿಸುವಿಕೆ ಮತ್ತು ಜಾಗೃತಿಯ ಮೇಲೆ ಹೊಸ ಗಮನವನ್ನು ಕೇಂದ್ರೀಕರಿಸುವ ಅಗತ್ಯವಿದೆ ಎಂದು ಅವರು ಹೇಳಿದರು.
ದೇಶದ ವಿಶಾಲ ಪರಂಪರೆಯನ್ನು ಉತ್ತೇಜಿಸುವ ಕಾರ್ಯವನ್ನು ಸರಿಯಾಗಿ ಮತ್ತು ಸಮಯಕ್ಕೆ ಅನುಗುಣವಾಗಿ ಮುಂದಕ್ಕೆ ಸಾಗಿಸುವುದು ಯುವ ಪೀಳಿಗೆಯ ಜವಾಬ್ದಾರಿಯಾಗಿದೆ ಎಂದು ಸಚಿವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.