ನವದೆಹಲಿ : ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಕರ್ಫ್ಯೂ/ಲಾಕ್ ಡೌನ್ ವಿಧಿಸಿದ ವೇಳೆ ಅವಶ್ಯಕ ವಸ್ತುಗಳ ಪೂರೈಕೆಯಲ್ಲಿ ನಿರಂತರತೆ ಕಾಯ್ದುಕೊಳ್ಳಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಅಕ್ರಮ ದಾಸ್ತಾನುಗಾರರ ವಿರುದ್ಧ ಶೂನ್ಯ ಸಹಿಷ್ಣುತೆ ನೀತಿಯನ್ನು ಅನುಸರಿಸಬೇಕು ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ ಒತ್ತಿ ಹೇಳಿದೆ.
ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳೊಂದಿಗೆ ಇಂದು ರಾಷ್ಟ್ರ ಮಟ್ಟದ ಸಭೆ ನಡೆಸಲಾಯಿತು. ಗ್ರಾಹಕ ವ್ಯವಹಾರಗಳ ಸಚಿವಾಲಯದ ಗ್ರಾಹಕ ವ್ಯವಹಾರಗಳ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಶ್ರೀಮತಿ ನಿಧಿ ಖರೆ ಅವರು ದೇಶಾದ್ಯಂತ ಅವಶ್ಯಕ ವಸ್ತುಗಳ ಲಭ್ಯತೆ ಮತ್ತು ಬೆಲೆಯ ಸ್ಥಿತಿಗತಿ ಪರಾಮರ್ಶೆ ನಡೆಸಿದರು. ನಾನಾ ರಾಜ್ಯಗಳ ನಾನಾ ಮಂಡಿಗಳಲ್ಲಿ ಅವಶ್ಯಕ ವಸ್ತುಗಳ ಬೆಲೆಗಳು ಹಾಗೂ ಹೊಸದಾಗಿ ಮಾರುಕಟ್ಟೆಗೆ ಬರುತ್ತಿರುವ ಪದಾರ್ಥಗಳ ಮಾಹಿತಿಯನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಹಂಚಿಕೊಳ್ಳಲಾಯಿತು.
ಅಲ್ಲದೆ ಆಹಾರ ಉತ್ಪನ್ನಗಳು/ಔಷಧಗಳು, ಶುಚಿತ್ವ ಕಾಪಾಡುವ ಉತ್ಪನ್ನಗಳು ಸೇರಿದಂತೆ ಅವಶ್ಯಕ ಸಾಮಗ್ರಿಗಳ ಬೆಲೆ ಕುರಿತು ಚರ್ಚೆ ನಡೆಸಲಾಯಿತು ಹಾಗು ಅವಶ್ಯಕ ಸೇವೆಗಳ ಬೆಲೆ ಹೆಚ್ಚಳವಾಗಿಲ್ಲ ಮತ್ತು ಅವು ನ್ಯಾಯಯುತ ಬೆಲೆಗೆ ಲಭ್ಯವಾಗುತ್ತಿರುವ ಬಗ್ಗೆ ಚರ್ಚಿಸಲಾಯಿತು. ಆಹಾರ ಮತ್ತು ನಾಗರಿಕ ಪೂರೈಕೆ, ಕಾನೂನು ಮಾಪನ ಶಾಸ್ತ್ರ ನಿಯಂತ್ರಕರು, ಆಹಾರ ಸುರಕ್ಷತೆ, ಆರೋಗ್ಯ ಮತ್ತು ಪೊಲೀಸರನ್ನೊಳಗೊಂಡ ಜಂಟಿ ತಂಡಗಳನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ರಚಿಸಲಾಗುವುದು ಮತ್ತು ಜಿಲ್ಲಾ ಮಟ್ಟದಲ್ಲಿ ಪರಿಣಾಮಕಾರಿ ಕಣ್ಗಾವಲು ಕೈಗೊಳ್ಳಲಾಗುವುದು ಹಾಗೂ ಬೇಡಿಕೆ/ಪೂರೈಕೆ ನಡುವೆ ಹೊಂದಿಕೆಯಾಗದ ಸ್ಥಿತಿಯನ್ನು ತಪ್ಪಿಸಲು ಜಾರಿ ಚಟುವಟಿಕೆಗಳನ್ನು ಕೈಗೊಳ್ಳಲು ನಿರ್ಧರಿಸಲಾಯಿತು. ಅಗತ್ಯ ವಸ್ತುಗಳ ಖರೀದಿ ಬಗ್ಗೆ ಜನರಲ್ಲಿ ಭಯ ನಿವಾರಣೆ ಮಾಡಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಪ್ರಚಾರ ಮತ್ತು ಜಾಗೃತಿ ಚಟುವಟಿಕೆಗಳನ್ನು ಕೈಗೊಳ್ಳಬೇಕೆಂದು ಸೂಚಿಸಲಾಯಿತು.
ಸಭೆಯ ವೇಳೆ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಕಾಯ್ದುಕೊಳ್ಳಲು ಅಕ್ರಮ ವರ್ತಕರು ಮತ್ತು ದಾಸ್ತಾನುಗಾರರ ವಿರುದ್ಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಕಠಿಣ ಕ್ರಮ ಕೈಗೊಳ್ಳುವ ಅಧಿಕಾರವಿದೆ ಎಂದು ಬಲವಾಗಿ ಪ್ರತಿಪಾದಿಸಲಾಯಿತು.
1955ರ ಅವಶ್ಯಕ ವಸ್ತುಗಳ ಕಾಯ್ದೆಯ ಸೆಕ್ಷನ್ 3ರ ಪ್ರಕಾರ ಅವಶ್ಯಕ ವಸ್ತುಗಳ ಉತ್ಪಾದನೆ ನಿಯಂತ್ರಣ, ಪೂರೈಕೆ, ವಿತರಣೆ ಅಧಿಕಾರವಿದೆ ಮತ್ತು ಅದನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿಯೋಜಿಸಲಾಗಿದೆ. 1980ರ ಅತ್ಯವಶ್ಯಕ ಸಾಮಗ್ರಿಗಳ ಪೂರೈಕೆ ನಿರ್ವಹಣೆ ಮತ್ತು ಕಾಳಸಂತೆಯಲ್ಲಿ ಮಾರಾಟ ನಿಯಂತ್ರಣ ಕಾಯಿದೆಯ ಸೆಕ್ಷನ್ 3ರ ಪ್ರಕಾರ ಸಮುದಾಯಕ್ಕೆ ಅಗತ್ಯವಾದ ಸರಕುಗಳ ಸರಬರಾಜಿನ ನಿರ್ವಹಣೆಗೆ ಯಾವುದೇ ರೀತಿಯ ಪೂರ್ವಾಗ್ರಹವಿಲ್ಲದೆ ವರ್ತಿಸುವುದನ್ನು ತಡೆಯುವ ಉದ್ದೇಶದಿಂದ ಯಾವುದೇ ವ್ಯಕ್ತಿಯನ್ನು ಗರಿಷ್ಠ ಆರು ತಿಂಗಳವರೆಗೆ ಬಂಧಿಸಬಹುದು.
1955ರ ಅವಶ್ಯಕ ವಸ್ತುಗಳ ಕಾಯ್ದೆ ಮತ್ತು 1980ರ ಅವಶ್ಯಕ ವಸ್ತುಗಳ ಪೂರೈಕೆ ನಿರ್ವಹಣೆ ಮತ್ತು ಕಾಳಸಂತೆ ಮಾರಾಟ ನಿಯಂತ್ರಣ ಕಾಯ್ದೆಯನ್ನು ಜಾರಿಯ ನಿರ್ವಹಣೆಯನ್ನು ಗ್ರಾಹಕ ವ್ಯವಹಾರಗಳ ಇಲಾಖೆ ಹೊತ್ತಿದೆ. ಗ್ರಾಹಕರಿಗೆ ಸೂಕ್ತ ಬೆಲೆಗೆ ಅವಶ್ಯಕ ವಸ್ತುಗಳು ಲಭ್ಯವಾಗುವಂತೆ ಮಾಡಬೇಕು ಮತ್ತು ಗ್ರಾಹಕರನ್ನು ಅಕ್ರಮ ವರ್ತಕರು ಮತ್ತು ದಾಸ್ತಾನುಗಾರರಿಂದ ದೌರ್ಜನ್ಯಕ್ಕೊಳಗಾಗುವುದರಿಂದ ರಕ್ಷಿಸುವ ಈ ಎರಡೂ ಕಾಯ್ದೆಗಳನ್ನು ಜಾರಿಗೊಳಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.