ಲಕ್ನೋ: ವೈದ್ಯಕೀಯ ಆಮ್ಲಜನಕದ ಅಕ್ರಮ ಮಾರಾಟದ ಬಗ್ಗೆ ಬರುತ್ತಿರುವ ವರದಿಯನ್ನು ಗಮನದಲ್ಲಿಟ್ಟುಕೊಂಡು, ಎಲ್ಲಾ ಆಮ್ಲಜನಕ ವಾಹನಗಳಿಗೆ ಜಿಪಿಎಸ್ ಟ್ರ್ಯಾಕಿಂಗ್ ಸಾಧನ ಅಳವಡಿಸುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
“ಎಲ್ಲಾ ಆಮ್ಲಜನಕ ಘಟಕಗಳಿಗೆ ಪೊಲೀಸ್ ರಕ್ಷಣೆ ಒದಗಿಸಿ. ಜಿಪಿಎಸ್ ಸಾಧನಗಳ ಮೂಲಕ ಆಮ್ಲಜನಕದ ವಾಹನಗಳನ್ನು ಮೇಲ್ವಿಚಾರಣೆ ಮಾಡಿ. ಆಮ್ಲಜನಕ ಮತ್ತು ಇತರ ಜೀವ ಉಳಿಸುವ ಔಷಧಿಗಳ ಕಪ್ಪು ಮಾರಾಟ ತಡೆಯಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಿ” ಎಂದು ಮುಖ್ಯಮಂತ್ರಿ ಮಂಗಳವಾರ ಹೇಳಿದ್ದಾರೆ.
ಪ್ರತಿ ಆಸ್ಪತ್ರೆಯಲ್ಲಿ ಕನಿಷ್ಠ 36 ಗಂಟೆಗಳ ಬ್ಯಾಕಪ್ ಆಮ್ಲಜನಕವಿದೆಯೆ ಎಂದು ಖಚಿತಪಡಿಸಿಕೊಳ್ಳಲು ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಸರ್ಕಾರದ ವಕ್ತಾರರ ಪ್ರಕಾರ, “ಎಂಎಸ್ಎಂಇಗಳು ಸೇರಿದಂತೆ ಎಲ್ಲಾ ಸಣ್ಣ ಮತ್ತು ದೊಡ್ಡ ಕೈಗಾರಿಕಾ ಘಟಕಗಳಲ್ಲಿ ಉತ್ಪತ್ತಿಯಾಗುವ ಆಮ್ಲಜನಕವನ್ನು ವೈದ್ಯಕೀಯ ಉದ್ದೇಶಗಳಿಗಾಗಿ ಮಾತ್ರ ಬಳಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ಮುಖ್ಯಮಂತ್ರಿ ಅಧಿಕಾರಿಗಳನ್ನು ಕೇಳಿದ್ದಾರೆ. ಈ ಆಮ್ಲಜನಕ ಘಟಕಗಳನ್ನು ಹತ್ತಿರದ ಆಸ್ಪತ್ರೆಗೆ ಸಂಪರ್ಕಿಸಬೇಕು. ಈ ನಿಟ್ಟಿನಲ್ಲಿ ಸಮಗ್ರ ಕ್ರಿಯಾ ಯೋಜನೆಯನ್ನು ಇಂದು ಸಿದ್ಧಪಡಿಸಬೇಕು” ಎಂದಿದ್ದಾರೆ.
ರಾಜ್ಯದಲ್ಲಿ ಐದು ಹೊಸ ಆಮ್ಲಜನಕ ಘಟಕಗಳನ್ನು ಸ್ಥಾಪಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದು ಮುಖ್ಯಮಂತ್ರಿ ಮಾಹಿತಿ ನೀಡಿದ್ದಾರೆ. “ಹೆಚ್ಚಿನ ಸಿದ್ಧತೆಗಾಗಿ, 100 ಕ್ಕೂ ಹೆಚ್ಚು ಹಾಸಿಗೆಗಳ ಸಾಮರ್ಥ್ಯವಿರುವ ಎಲ್ಲಾ ಆಸ್ಪತ್ರೆಗಳಲ್ಲಿ ಆಮ್ಲಜನಕ ಘಟಕಗಳನ್ನು ಸ್ಥಾಪಿಸುವುದನ್ನು ಕಡ್ಡಾಯಗೊಳಿಸಲಾಗುತ್ತಿದೆ” ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.