ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಹೊರಡಿಸಿದೆ.
ಇಂದಿನಿಂದ ತೊಡಗಿದಂತೆ ಮೇ 4 ರ ವರೆಗೂ ಈ ನೂತನ ಮಾರ್ಗಸೂಚಿ ಜಾರಿಯಲ್ಲಿರಲಿದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ತಿಳಿಸಿದ್ದಾರೆ.
ರಾಜ್ಯದಲ್ಲಿ ನೈಟ್ ಕರ್ಫ್ಯೂ ರಾತ್ರಿ 9 ರಿಂದ ಬೆಳಗ್ಗೆ 6 ರ ವರೆಗೆ ಮೇ 4 ರ ವರೆಗೆ ಇರಲಿದೆ. ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಮುಂಜಾನೆ 6 ರ ವರೆಗೆ ವೀಕೆಂಡ್ ಕರ್ಫ್ಯೂ ಜಾರಿಗೆ ತರಲಾಗಿದೆ.
ಶಾಲಾ ಕಾಲೇಜುಗಳು ಬಂದ್ ಆಗಲಿವೆ. ಸ್ವಿಮ್ಮಿಂಗ್ ಫೂಲ್, ಶಾಪಿಂಗ್ ಮಾಲ್, ಜಿಮ್, ಥಿಯೇಟರ್, ಬಾರ್, ಸ್ಪಾ ಸೇರಿದಂತೆ ಇನ್ನಿತರ ಕ್ರೀಡಾ, ಮನರಂಜನಾ ವಲಯಕ್ಕೆ ನಿಷೇಧ ಹೇರಲಾಗಿದೆ. ಧಾರ್ಮಿಕ, ರಾಜಕೀಯ ಕಾರ್ಯಕ್ರಮ, ಸಭೆ ಸಮಾರಂಭಗಳಿಗೂ ನಿಷೇಧ ಹೇರಲಾಗಿದೆ. ಮದುವೆಗೆ 50 ಮಂದಿಗೆ ಅವಕಾಶ. ಅಂತ್ಯಕ್ರಿಯೆಗೆ 20 ಮಂದಿಗೆ ಅವಕಾಶ ನೀಡಲಾಗಿದೆ.
ದೇವಾಲಯಗಳಲ್ಲಿ ಪುರೋಹಿತರು ಪೂಜೆ ಸಲ್ಲಿಸಬಹುದು. ಭಕ್ತಾದಿಗಳಿಗೆ ಅವಕಾಶ ಇಲ್ಲ. ಹೊಟೇಲ್, ರೆಸ್ಟೋರೆಂಟ್ಗಳಲ್ಲಿಯೂ ಪಾರ್ಸೆಲ್ ವ್ಯವಸ್ಥೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಕಟ್ಟಡ ಕಾರ್ಮಿಕರು ನಿರ್ಮಾಣ ಕಾರ್ಯದಲ್ಲಿ ನಡೆಯಲಿವೆ. ಮಳೆಗಾಲದ ಸಿದ್ಧತೆಗೂ ಅವಕಾಶ ನೀಡಲಾಗಿದೆ. ಕೃಷಿ ಚಟುವಟಿಕೆಗಳನ್ನು ನಡೆಸಬಹುದು.
ಕೊರೋನಾ ಮಾರ್ಗಸೂಚಿ ಅನುಸರಿಸಿ ಕೈಗಾರಿಕಾ ವಲಯ ಕಾರ್ಯ ನಿರ್ವಹಿಸಲಿದೆ. ಆಹಾರ ವಸ್ತುಗಳನ್ನು, ಅಗತ್ಯ ವಸ್ತುಗಳ ಮಾರಾಟಕ್ಕೆ ಅವಕಾಶ ಇದೆ. ಬಸ್ಸುಗಳಲ್ಲಿ 50% ಜನರು ಪ್ರಯಾಣ ಮಾಡಬಹುದಾಗಿದೆ. ಮುಂದಿನ 14 ದಿನಗಳ ಬಳಿಕ ಮತ್ತೆ ಪರಿಸ್ಥಿತಿ ಅವಲೋಕನ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ತಿಳಿಸಿದೆ.
ಮಾಧ್ಯಮ, ಸಲೂನ್, ಬ್ಯೂಟಿ ಪಾರ್ಲರ್ಗಳಿಗೆ ಅವಕಾಶವಿಲ್ಲ. ಐಟಿ ಕಂಪೆನಿಗಳು ವರ್ಕ್ ಫ್ರಂ ಹೋಂಗೆ ಆದ್ಯತೆ ನೀಡುವಂತೆಯೂ ಸರ್ಕಾರ ಸೂಚಿಸಿದೆ. ಅಗತ್ಯ ಸೇವೆಗಳು ಜಾರಿಯಲ್ಲಿರಲಿವೆ. ರಾಜ್ಯಗಳ ನಡುವಿನ ಸಂಪರ್ಕಕ್ಕೆ ಯಾವುದೇ ನಿರ್ಬಂಧ ಇಲ್ಲ. ಪೆಟ್ರೋಲ್, ಡಿಸೇಲ್ ತುಂಬಿಸುವ ಪೆಟ್ರೋಲ್ ಬಂಕ್ಗಳು, ಗ್ಯಾಸ್ ಏಜೆನ್ಸಿಗಳು ಕಾರ್ಯ ನಿರ್ವಹಿಸುತ್ತದೆ. ಸಾರಿಗೆ ವ್ಯವಸ್ಥೆ ಯನ್ನು ಕೊರೋನಾ ನಿಯಮಗಳನ್ನು ಅಳವಡಿಸಿಕೊಂಡು ಕಾರ್ಯ ನಿರ್ವಹಿಸಲು ಸರ್ಕಾರ ಅನುಮತಿ ನೀಡಿದೆ.
ಆರೋಗ್ಯ ಸೇವೆಗಳು 24×7 ಕಾರ್ಯ ನಿರ್ವಹಿಸುತ್ತದೆ ಎಂದು ಸರ್ಕಾರ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.