ಶ್ರೀನಗರ: ಉತ್ತರ ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಉಗ್ರರರಿಗೆ ನೆರವು ನೀಡುವ ದಿ ರೆಸಿಸ್ಟೆನ್ಸ್ ಫ್ರಂಟ್ (TRF)) ನ ಇಬ್ಬರು ಭೂಗತ ಕಾರ್ಯಕರ್ತರನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬುಧವಾರ ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪೊಲೀಸರು ಈ ಬಗ್ಗೆ ಹೇಳಿಕೆಯನ್ನು ಬಿಡುಗಡೆ ಮಾಡಿ, “ಕೆಲವು ವ್ಯಕ್ತಿಗಳು ಉಗ್ರರಿಗೆ ಸಹಾಯ ಮಾಡುವಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಬಗ್ಗೆ ಬಂಡಿಪೋರಾ ಪೊಲೀಸ್, ಸೇನೆ ಮತ್ತು ಸಿಆರ್ಪಿಎಫ್ ಜಂಟಿಯಾಗಿ ಮಾಹಿತಿ ಕಲೆ ಹಾಕಿದ್ದು, ಈ ನಿಟ್ಟಿನಲ್ಲಿ ಕಾರ್ಯಾಚರಿಸಿ ಇಬ್ಬರನ್ನು ಬಂಧಿಸಿದೆ. ಇದು ಟಿಆರ್ಎಫ್ ಸಂಘಟನೆಯ ಭಯೋತ್ಪಾದಕ ಘಟಕವನ್ನು ಬಹಿರಂಗಪಡಿಸಲು ಕಾರಣವಾಯಿತು” ಎಂದಿದ್ದಾರೆ.
“ಸಂಪೂರ್ಣ ತನಿಖೆ ಮತ್ತು ತಾಂತ್ರಿಕ ವಿಶ್ಲೇಷಣೆಯ ನಂತರ, ಟಿಆರ್ಎಫ್ನ ಎರಡು ಒಜಿಡಬ್ಲ್ಯೂಗಳಾದ ಮುಷ್ತಾಕ್ ಅಹ್ಮದ್ ಪರೇ ಮತ್ತು ಸಜಾದ್ ಅಹ್ಮದ್ ಸೋಫಿ ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದು ಕಂಡುಬಂದಿದೆ ಮತ್ತು ಟಿಆರ್ಎಫ್ ಉಗ್ರರಿಗೆ ಆಶ್ರಯ ಮತ್ತು ಲಾಜಿಸ್ಟಿಕ್ಸ್ ಅನ್ನು ಸಕ್ರಿಯವಾಗಿ ಒದಗಿಸುವುದು ತಿಳಿದು ಬಂದಿದೆ” ಎಂದು ಪೊಲೀಸರು ತಿಳಿಸಿದ್ದಾರೆ.
ಟಿಆರ್ಎಫ್ನ ಹಲವು ಕಾರುಕರ್ತರು ರಾಜ್ಯದಲ್ಲಿ ಭಯೋತ್ಪಾದನೆಗೆ ಸೇರಲು ಯುವಕರನ್ನು ಪ್ರೇರೇಪಿಸುತ್ತಿದ್ದಾರೆ ಎಂದು ಪೊಲೀಸರು ಬಹಿರಂಗಪಡಿಸಿದ್ದಾರೆ. ಭಯೋತ್ಪಾದಕ ಸಹಚರರನ್ನು ಬಂಧಿಸಲಾಗಿದ್ದು, ಅವರಿಂದ ಅವರಿಂದ ಅಕ್ರಮ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಈ ನಿಟ್ಟಿನಲ್ಲಿ, ಆರಗಂನ ಪೊಲೀಸ್ ಠಾಣೆಯಲ್ಲಿ ಕಾನೂನಿನ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.