ನವದೆಹಲಿ: ಮಹಾರಾಷ್ಟ್ರದ ನಾಸಿಕ್ನ ಆಸ್ಪತ್ರೆಯಲ್ಲಿ ಆಮ್ಲಜನಕ ಸೋರಿಕೆಯಾದ ಪರಿಣಾಮ ವೆಂಟಿಲೇಟರ್ ಬೆಂಬಲದಲ್ಲಿದ್ದ 22 ರೋಗಿಗಳು ಬುಧವಾರ ಮೃತಪಟ್ಟಿದ್ದಾರೆ. ಸೋರಿಕೆಯಿಂದಾಗಿ ಆಮ್ಲಜನಕದ ಪೂರೈಕೆಗೆ ಅಡ್ಡಿಯಾಗಿ ಈ ಸಾವು ಸಂಭವಿಸಿದೆ. ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೊಪೆ ಅವರು ಈ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಘಟನೆಯಲ್ಲಿ ಸಂಭವಿಸಿದ ಪ್ರಾಣಹಾನಿ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಘಟನೆಯನ್ನು ಹೃದಯವಿದ್ರಾವಕ ಎಂದು ಕರೆದಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ನಾಸಿಕ್ನ ಝಾಕೀರ್ ಹುಸೇನ್ ಆಸ್ಪತ್ರೆಯಲ್ಲಿ ನಡೆದ ಪ್ರಾಣಹಾನಿ ಬಗ್ಗೆ ಸಂತಾಪ ಸೂಚಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಕೊರೋನಾ ಪರಿಸ್ಥಿತಿ ಗಂಭೀರವಾಗಿದೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರವು ಬುಧವಾರದಿಂದ ರಾಜ್ಯದಲ್ಲಿ ಸಂಪೂರ್ಣ ಲಾಕ್ಡೌನ್ ಘೋಷಿಸುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ. ವೈರಸ್ ಹರಡುವುದನ್ನು ನಿಯಂತ್ರಿಸಲು ಹಲವಾರು ರಾಜ್ಯಗಳು ಭಾಗಶಃ ಅಥವಾ ಸಂಪೂರ್ಣ ಲಾಕ್ಡೌನ್ ವಿಧಿಸಿವೆ.
The tragedy at a hospital in Nashik because of oxygen tank leakage is heart-wrenching. Anguished by the loss of lives due to it. Condolences to the bereaved families in this sad hour.
— Narendra Modi (@narendramodi) April 21, 2021
नासिक के एक अस्पताल में ऑक्सिजन लीक होने से हुई दुर्घटना का समाचार सुन व्यथित हूँ। इस हादसे में जिन लोगों ने अपनों को खोया है उनकी इस अपूरणीय क्षति पर अपनी गहरी संवेदनाएं व्यक्त करता हूँ। बाकी सभी मरीजों की कुशलता के लिए ईश्वर से प्रार्थना करता हूँ।
— Amit Shah (@AmitShah) April 21, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.