ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ದೇಶಾದ್ಯಂತ ಆಮ್ಲಜನಕದ ಪೂರೈಕೆಯನ್ನು ಪರಿಶೀಲಿಸಿದರು ಮತ್ತು ಅದರ ಲಭ್ಯತೆಯನ್ನು ಹೆಚ್ಚಿಸುವ ಮಾರ್ಗಗಳು ಮತ್ತು ವಿಧಾನಗಳನ್ನು ಚರ್ಚಿಸಿದರು. ಆಮ್ಲಜನಕದ ಪೂರೈಕೆಯನ್ನು ಸುಧಾರಿಸಲು ಕಳೆದ ಕೆಲವು ವಾರಗಳಲ್ಲಿ ಕೈಗೊಂಡ ಪ್ರಯತ್ನಗಳ ಬಗ್ಗೆ ಅಧಿಕಾರಿಗಳು ಅವರಿಗೆ ವಿವರಿಸಿದರು.
ಕೊರೋನಾ ಹಿನ್ನೆಲೆಯಲ್ಲಿ ಅನೇಕ ಅಂಶಗಳತ್ತ ವೇಗವಾಗಿ ಕೆಲಸ ಮಾಡುವ ಅಗತ್ಯತೆಯ ಬಗ್ಗೆ ಮಾತನಾಡಿದ ಪ್ರಧಾನಿ, ಆಮ್ಲಜನಕದ ಉತ್ಪಾದನೆಯನ್ನು ಹೆಚ್ಚಿಸುವುದು, ವಿತರಣೆಯ ವೇಗವನ್ನು ಹೆಚ್ಚಿಸುವುದು ಮತ್ತು ಆರೋಗ್ಯ ಸೌಲಭ್ಯಗಳಿಗೆ ಆಮ್ಲಜನಕದ ಬೆಂಬಲವನ್ನು ಒದಗಿಸಲು ನವೀನ ಮಾರ್ಗಗಳನ್ನು ಬಳಸುವ ಅಗತ್ಯತೆಯನ್ನು ಪ್ರತಿಪಾದಿಸಿದರು.
ಆಮ್ಲಜನಕದ ಬೇಡಿಕೆಯನ್ನು ಗುರುತಿಸಲು ಮತ್ತು ಅದಕ್ಕೆ ತಕ್ಕಂತೆ ಸಮರ್ಪಕ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ರಾಜ್ಯಗಳೊಂದಿಗೆ ಸಮನ್ವಯದಿಂದ ಕೆಲಸ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಪ್ರಧಾನಿಗೆ ತಿಳಿಸಿದರು. ರಾಜ್ಯಗಳಿಗೆ ಆಮ್ಲಜನಕದ ಪೂರೈಕೆ ಹೇಗೆ ಸ್ಥಿರವಾಗಿ ಹೆಚ್ಚುತ್ತಿದೆ ಎಂಬುದರ ಕುರಿತು ಪ್ರಧಾನ ಮಂತ್ರಿಗೆ ವಿವರಿಸಿದರು. 6,785 ಮೆ.ಟನ್ ವೈದ್ಯಕೀಯ ಆಮ್ಲಜನಕಕ್ಕೆ 20 ರಾಜ್ಯಗಳಿಂದ ಪ್ರಸ್ತುತ ಬೇಡಿಕೆ ಇದ್ದು, ಭಾರತ ಸರ್ಕಾರವು ಏಪ್ರಿಲ್ 21 ರಿಂದ ಈ ರಾಜ್ಯಗಳಿಗೆ ದಿನಕ್ಕೆ 6,822 ಮೆ.ಟನ್ ಮೀಸಲಿಟ್ಟಿದೆ.
ಕಳೆದ ಕೆಲವು ದಿನಗಳಲ್ಲಿ, ಖಾಸಗಿ ಮತ್ತು ಸಾರ್ವಜನಿಕ ಉಕ್ಕಿನ ಸ್ಥಾವರಗಳು, ಕೈಗಾರಿಕೆಗಳು, ಆಮ್ಲಜನಕ ತಯಾರಕರ ಕೊಡುಗೆಯ ಮೂಲಕ ಮತ್ತು ಅನಿವಾರ್ಯವಲ್ಲದವರಿಗೆ ಆಮ್ಲಜನಕದ ಪೂರೈಕೆಯನ್ನು ನಿಷೇಧಿಸುವ ಮೂಲಕ ದ್ರವ ವೈದ್ಯಕೀಯ ಆಮ್ಲಜನಕದ ಲಭ್ಯತೆಯನ್ನು ದಿನಕ್ಕೆ ಸುಮಾರು 3,300 ಮೆ.ಟನ್ ಹೆಚ್ಚಿಸಲಾಗಿದೆ
ಮಂಜೂರಾದ ಪಿಎಸ್ಎ ಆಮ್ಲಜನಕ ಸ್ಥಾವರಗಳನ್ನು ಆದಷ್ಟು ಬೇಗ ಕಾರ್ಯರೂಪಕ್ಕೆ ತರಲು ರಾಜ್ಯಗಳೊಂದಿಗೆ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಅಧಿಕಾರಿಗಳು ಪ್ರಧಾನಿಗೆ ಮಾಹಿತಿ ನೀಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.