ಮೈಸೂರು: ಕೊರೋನಾ ಸೋಂಕಿತರ ಚಿಕಿತ್ಸೆಗೆ ಔಷಧಿ ಲಭ್ಯತೆ, ಆಕ್ಸಿಜನ್ ಕೊರತೆ ನಿವಾರಿಸುವ ನಿಟ್ಟಿನಲ್ಲಿ ಡ್ರಗ್ ಕಂಟ್ರೋಲರ್ ಕಚೇರಿಯಿಂದ ಸಹಾಯವಾಣಿ, ವಾರ್ ರೂಂ ನಿಂದ ಹಾಸಿಗೆ ಲಭ್ಯತೆ ಕುರಿತ ಮಾಹಿತಿ, ಆಯಾ ಕ್ಷೇತ್ರಕ್ಕೆ ಸಂಬಂಧಪಟ್ಟ ಶಾಸಕರ ನೇತೃತ್ವದಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ತೆಗೆದುಕೊಳ್ಳುವುದಾಗ ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ.
ಮೈಸೂರಿನಲ್ಲಿ ಕೊರೋನಾ ಸೋಂಕಿತರ ಮರಣ ಪ್ರಮಾಣ 4% ಗಳಷ್ಟಿದೆ. ಸಾವಿನ ಸಂಬಂಧ ಆಡಿಟ್ ನಡೆಯುತ್ತಿದ್ದು, ನಿಖರ ಕಾರಣಗಳನ್ನು ಪತ್ತೆ ಮಾಡಲಾಗುತ್ತದೆ. ಮೈಸೂರು ನಗರದಲ್ಲಿ ಆರೋಗ್ಯ ಸೇವೆಗಳು ಉತ್ತಮವಾಗಿದ್ದು ಮರಣ ಪ್ರಮಾಣ ನಿಯಂತ್ರಣ ಹಿನ್ನೆಲೆಯಲ್ಲಿ ಅಗತ್ಯ ಕ್ರಮ ವಹಿಸಬೇಕಿದೆ. ಖಾಸಗಿ ಆಸ್ಪತ್ರೆಗಳಿಂದಲೂ 50% ಗಳಷ್ಟು ಹಾಸಿಗೆಗಳನ್ನು ಸರ್ಕಾರ ತನ್ನ ಸುಪರ್ಧಿಗೆ ಪಡೆದು ಸೋಂಕಿರಿಗೆ ಚಿಕಿತ್ಸೆ ನೀಡಲು ಅನುಕೂಲ ಕಲ್ಪಿಸಲಿದೆ ಎಂದು ಅವರು ತಿಳಿಸಿದ್ದಾರೆ.
ಸರ್ಕಾರಕ್ಕೆ ಜನರ ಜೀವನ ಬಹಳ ಮುಖ್ಯ. ಈ ಹಿನ್ನೆಲೆಯಲ್ಲಿ ಗುಂಪುಗೂಡುವುದು, ಸಾಂಕ್ರಾಮಿಕ ಹರಡಲು ಕಾರಣವಾಗುವ ಚಟುವಟಿಕೆಗಳನ್ನು ತಡೆಯಲಾಗಿದೆ. ಸರ್ಕಾರ ರೂಪಿಸಿರುವ ಕೊರೋನಾ ಮಾರ್ಗಸೂಚಿಗಳನ್ನು ಪಾಲನೆ ಮಾಡುವಂತೆಯೂ ಅವರು ಮನವಿ ಮಾಡಿದ್ದಾರೆ. ಕೊರೋನಾ ಲಸಿಕೆಗಳನ್ನು ಪಡೆದುಕೊಳ್ಳುವಂತೆಯೂ ಸಚಿವರು ಸೂಚಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.