ನವದೆಹಲಿ: ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣ ಮತ್ತು ನಿರ್ವಹಣೆಯನ್ನು ಟ್ರಸ್ಟ್ ನೋಡಿಕೊಳ್ಳುತ್ತಿರುವ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅಯೋಧ್ಯೆಯಲ್ಲಿ ಆಮ್ಲಜನಕ ಘಟಕವನ್ನು ಸ್ಥಾಪಿಸಲಿದೆ ಎಂದು ಮೂಲಗಳು ವರದಿ ಮಾಡಿವೆ.
ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಟ್ರಸ್ಟಿ ಆಗಿರುವ ಡಾ.ಅನಿಲ್ ಮಿಶ್ರಾ ಈ ಬಗ್ಗೆ ಮಾಹಿತಿ ನೀಡಿ, “ಇಡೀ ದೇಶವು ಕೋವಿಡ್ -19 ವೈರಸ್ನೊಂದಿಗೆ ಹೋರಾಡುತ್ತಿದೆ. ಹೀಗಾಗಿ 55 ಲಕ್ಷ ರೂ.ಗಳ ವೆಚ್ಚದಲ್ಲಿ ಆಮ್ಲಜನಕ ಘಟಕವನ್ನು ಸ್ಥಾಪಿಸುವ ಮೂಲಕ ಈ ಹೋರಾಟಕ್ಕೆ ನೆರವು ನೀಡಲು ಟ್ರಸ್ಟ್ ನಿರ್ಧರಿಸಿದೆ” ಎಂದಿದ್ದಾರೆ.
ಈ ಘಟಕವನ್ನು ಅಯೋಧ್ಯೆಯ ದಶರಥ್ ವೈದ್ಯಕೀಯ ಕಾಲೇಜಿನಲ್ಲಿ ಸ್ಥಾಪಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಕಳೆದ ಮಾರ್ಚ್ 15 ರಂದು, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಅಡಿಪಾಯ ಹಾಕುವ ಕೆಲಸ ಪ್ರಾರಂಭವಾಯಿತು. ಇದೀಗ ಅಲ್ಲಿ ನಿರ್ಮಾಣ ಕಾರ್ಯ ನಡೆಯುತ್ತಿದೆ. ಕೆಲವೇ ವರ್ಷದಲ್ಲಿ ಭವ್ಯ ಮಂದಿರ ತಲೆ ಎತ್ತುವ ನಿರೀಕ್ಷೆ ಇದೆ.
ರಾಮ ಮಂದಿರದ ನಿರ್ಮಾಣವನ್ನು ವೀಕ್ಷಿಸಲು ಭಕ್ತರಿಗೆ ಅವಕಾಶ ಕಲ್ಪಿಸಲು ದರ್ಶನ ಬಿಂದುವನ್ನು ನಿರ್ಮಿಸಲು ಟ್ರಸ್ಟ್ ಯೋಜಿಸುತ್ತಿದೆ.
ತಾತ್ಕಾಲಿಕ ದೇವಾಲಯಕ್ಕೆ ಹೋಗುವ ದಾರಿಯಲ್ಲಿರುವ ಸ್ಥಳದಲ್ಲಿ ಟ್ರಸ್ಟ್ ದರ್ಶನ ಸ್ಥಳವನ್ನು ಯೋಜಿಸುತ್ತದೆ ಮತ್ತು ಇಲ್ಲಿಂದ ನಿರ್ಮಾಣ ಸ್ಥಳದ ವಿಶಾಲ ನೋಟವನ್ನು ಕಣ್ತುಂಬಿಕೊಳ್ಳಬಹುದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.