ನವದೆಹಲಿ: ಏಕ ಶ್ರೇಣಿ, ಏಕ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲು ಎನ್ಡಿಎ ಸರ್ಕಾರ ಬದ್ಧವಾಗಿದೆ ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ಶುಕ್ರವಾರ ಪುನರುಚ್ಚರಿಸಿದ್ದಾರೆ.
ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕೆಲವೊಂದು ತಾಂತ್ರಿಕ ಸಮಸ್ಯೆಗಳಿದ್ದರೂ ಸರ್ಕಾರ ಈ ಯೋಜನೆಯ ಅನುಷ್ಠಾನಕ್ಕೆ ಬೇಕಾದ ಎಲ್ಲಾ ಕಾರ್ಯಗಳನ್ನು ಮಾಡುತ್ತಿದೆ ಎಂದಿದ್ದಾರೆ.
ಏಕ ಶ್ರೇಣಿ, ಏಕ ಪಿಂಚಣಿ ಯೋಜನೆ ಜಾರಿಗೆ ಒತ್ತಾಯಿಸಿ ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಮಾಜಿ ಸೈನಿಕರನ್ನು ಪೊಲೀಸರು ಬೆಳಿಗ್ಗೆ ಅಲ್ಲಿಂದ ಎಬ್ಬಿಸಲು ಪ್ರಯತ್ನಿಸಿದರು. ಸ್ವಾತಂತ್ರೋತ್ಸವದ ಅಂಗವಾಗಿ ಜಾಗ ತೆರವು ಮಾಡುವಂತೆ ಹೇಳಲಾಗಿತ್ತು. ಆದರೆ ಬಳಿಕ ಪ್ರತಿಭಟನೆಯನ್ನು ನಡೆಸಲು ಅನುವು ಮಾಡಿಕೊಡಲಾಯಿತು.
ಇನ್ನೊಂದೆಡೆ ಎಎಪಿ ಮುಖಂಡ ಅರವಿಂದ್ ಕೇಜ್ರಿವಾಲ್ ಮತ್ತು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಮಾಜಿ ಸೈನಿಕರ ಬೆಂಬಲಕ್ಕೆ ಧಾವಿಸಿದ್ದಾರೆ.
ಆದರೆ ಜಂತರ್ ಮಂತರ್ಗೆ ಆಗಮಿಸಿದ ರಾಹುಲ್ ಅವರನ್ನು ಜಾಗ ಖಾಲಿ ಮಾಡುವಂತೆ ಮತ್ತು ಪ್ರತಿಭಟನೆಗೆ ರಾಜಕೀಯ ಬಣ್ಣ ನೀಡದಂತೆ ಮಾಜಿ ಸೈನಿಕರು ಸೂಚಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.