ನವದೆಹಲಿ: 2015 ಕ್ಕೆ ಹೋಲಿಸಿದರೆ 2020 ರಲ್ಲಿ ದೇಶದಲ್ಲಿ ಮಲೇರಿಯಾ ಪ್ರಕರಣಗಳಲ್ಲಿ ಶೇಕಡಾ 84 ರಷ್ಟು ಇಳಿಕೆ ಕಂಡುಬಂದಿದೆ, ಮಲೇರಿಯಾವನ್ನು ದೇಶದಿಂದ ನಿರ್ಮೂಲನೆ ಮಾಡಲು ಸರ್ಕಾರ ಮಾಡಿದ ಪ್ರಯತ್ನಗಳಿಂದ ಇದು ಸಾಧ್ಯವಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಹರ್ಷವರ್ಧನ್ ಹೇಳಿದ್ದಾರೆ.
ವಿಶ್ವ ಮಲೇರಿಯಾ ದಿನದ ಅಂಗವಾಗಿ ನಡೆದ ಕಾರ್ಯಕ್ರಮವನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ದೇಶಿಸಿ ಮಾತನಾಡಿದ ಅವರು, 2020 ರಲ್ಲಿ ಮಲೇರಿಯಾದಿಂದ ಶೇ.83 ರಷ್ಟು ಸಾವುಗಳು ಕಡಿಮೆಯಾಗಿವೆ ಎಂದಿದ್ದಾರೆ.
ಪ್ರತಿ ವರ್ಷ ಏಪ್ರಿಲ್ 25 ಅನ್ನು ವಿಶ್ವ ಮಲೇರಿಯಾ ದಿನವನ್ನಾಗಿ ಆಚರಿಸಲಾಗುತ್ತದೆ. ವರ್ಷದ ಶೂನ್ಯ ಮಲೇರಿಯಾ ಗುರಿಯನ್ನು ತಲುಪುವ ಥೀಮ್ನೊಂದಿಗೆ ಮಲೇರಿಯಾ ದಿನವನ್ನು ಆಚರಿಸಲಾಗುತ್ತಿದೆ.
ರಾಷ್ಟ್ರೀಯ ಮಟ್ಟದಲ್ಲಿ ಮಲೇರಿಯಾವನ್ನು ನಿರ್ಮೂಲನೆ ಮಾಡಲು ಮತ್ತು ಆರೋಗ್ಯ, ಜೀವನಮಟ್ಟ ಮತ್ತು ಬಡತನ ನಿವಾರಣೆಗೆ ಭಾರತ ಕೊಡುಗೆ ನೀಡುತ್ತಿದೆ ಎಂದು ಸಚಿವರು ಹೇಳಿದರು. ವಿಶ್ವ ಮಲೇರಿಯಾ ದಿನಾಚರಣೆಯು ಜಾಗತಿಕ ಸಮುದಾಯಕ್ಕೆ ಮತ್ತು ಈ ರೋಗವನ್ನು ನಿರ್ಮೂಲನೆ ಮಾಡಲು ಕೆಲಸ ಮಾಡುತ್ತಿರುವ ಎಲ್ಲಾ ಪೀಡಿತ ದೇಶಗಳಿಗೆ ಸ್ಫೂರ್ತಿ ನೀಡುತ್ತದೆ ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.