ಗಾಂಧೀನಗರ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಗುಜರಾತಿನ ಗಾಂಧಿನಗರದ ಕೋಲವಾಡ ಗ್ರಾಮದಲ್ಲಿ ಆಮ್ಲಜನಕ ಉತ್ಪಾದನಾ ಘಟಕವನ್ನು ಉದ್ಘಾಟಿಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಶಾ, ಗುಜರಾತ್ ಕೈಗಾರಿಕಾ ರಾಜ್ಯವಾಗಿರುವುದರಿಂದ ಇತರ ರಾಜ್ಯಗಳಿಗೆ ಹೋಲಿಸಿದರೆ ಗುಜರಾತ್ನಲ್ಲಿ ಆಮ್ಲಜನಕದ ಉತ್ಪಾದನೆ ಉತ್ತಮವಾಗಿದೆ. ಗುಜರಾತ್ ತನ್ನ ಹೆಚ್ಚುವರಿ ಆಮ್ಲಜನಕವನ್ನು ಇತರ ಹಲವು ರಾಜ್ಯಗಳಿಗೆ ಪೂರೈಸಿದೆ ಮತ್ತು ಒಂದು ಉತ್ತಮ ಉದಾಹರಣೆಯಾಗಿದೆ ಎಂದಿದ್ದಾರೆ.
ಭಾರತದಾದ್ಯಂತ ಆಮ್ಲಜನಕ ಉತ್ಪಾದನೆಗಾಗಿ ಪಿಎಂ ಕೇರ್ಸ್ ನಿಧಿ 100 ಘಟಕಗಳಿಗೆ ಅನುಮೋದನೆ ನೀಡಿದೆ. ಈ ಪೈಕಿ ಗುಜರಾತ್ನಲ್ಲಿ 11 ಘಟಕಗಳು ಲಭ್ಯವಾಗಲಿದ್ದು, ಅವು ಶೀಘ್ರದಲ್ಲೇ ಕಾರ್ಯನಿರ್ವಹಿಸಲಿವೆ ಎಂದು ಅವರು ಹೇಳಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಉದ್ಘಾಟಿಸಿದ ಆಕ್ಸಿಜನ್ ಪ್ಲಾಂಟ್ ಕೋಲವಾಡ ಆಯುರ್ವೇದ ಆಸ್ಪತ್ರೆಯಲ್ಲಿ ದಾಖಲಾದ ಕೋವಿಡ್ ರೋಗಿಗಳಿಗೆ ಆಮ್ಲಜನಕವನ್ನು ಒದಗಿಸಲಿದೆ. ಈ ಆಸ್ಪತ್ರೆಯಲ್ಲಿ ಸುಮಾರು 66 ಕೋವಿಡ್ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದು, ಈ ಘಟಕದಿಂದ ಆಮ್ಲಜನಕ ಪೂರೈಕೆಯನ್ನು ಮಾಡಲಾಗುತ್ತದೆ. ಘಟಕ ನಿಮಿಷಕ್ಕೆ 280 ಲೀಟರ್ ಆಮ್ಲಜನಕವನ್ನು ಉತ್ಪಾದಿಸುತ್ತಿದೆ, ಇದು 200 ಕೋವಿಡ್ ರೋಗಿಗಳ ಸಾಮರ್ಥ್ಯ ಹೊಂದಿರುವ ಕೋಲಾವಾಡಾ ಆಸ್ಪತ್ರೆಗೆ ಸಾಕಾಗುತ್ತದೆ. ಈ ಪ್ರೆಶರ್ ಸ್ವಿಂಗ್ ಆಡ್ಸರ್ಪ್ಶನ್ – ಪಿಎಸ್ಎ ಆಕ್ಸಿಜನ್ ಘಟಕವು ಸಾಮಾನ್ಯ ಗಾಳಿಯಿಂದ ನಿರಂತರವಾಗಿ ಆಮ್ಲಜನಕವನ್ನು ಉತ್ಪಾದಿಸುತ್ತದೆ ಎನ್ನಲಾಗಿದೆ.
ಗುಜರಾತ್ ಕಳೆದ 24 ಗಂಟೆಗಳಲ್ಲಿ ಕೋವಿಡ್ -19 ನ 13804 ಹೊಸ ಪ್ರಕರಣಗಳನ್ನು ದಾಖಲಿಸಿದೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಒಂದು ಲಕ್ಷ ದಾಟಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.