ನವದೆಹಲಿ: ಆಸ್ಟ್ರೇಲಿಯಾ ವೇಗಿ ಮತ್ತು ಕೋಲ್ಕತಾ ನೈಟ್ ರೈಡರ್ಸ್ ತಾರೆ ಪ್ಯಾಟ್ ಕಮ್ಮಿನ್ಸ್ ಅವರು ಕೋವಿಡ್ -19 ವಿರುದ್ಧದ ಭಾರತದ ಹೋರಾಟಕ್ಕೆ ಸಹಾಯ ಮಾಡಲು ಪಿಎಂ ಕೇರ್ಸ್ ಫಂಡ್ಗೆ $ 50,000 ದೇಣಿಗೆ ನೀಡುವುದಾಗಿ ಸೋಮವಾರ ಘೋಷಣೆ ಮಾಡಿದ್ದಾರೆ.
ಕಮ್ಮಿನ್ಸ್ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2021 ರಲ್ಲಿ ಭಾಗಿಯಾಗಿರುವ ಇತರ ಆಟಗಾರರನ್ನು ಸಹ ಸಹಾಯ ಮಾಡಲು ಪ್ರೇರೇಪಿಸಿದ್ದಾರೆ.
ಪ್ಯಾಟ್ ಕಮ್ಮಿನ್ಸ್ ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೆ ಬಿಡುಗಡೆ ಮಾಡಿದ್ದು, ಪಿಎಂ ಕೇರ್ಸ್ ಫಂಡ್ಗೆ ದೇಣಿಗೆ ನೀಡಲಿದ್ದೇನೆ,, ನಿರ್ದಿಷ್ಟವಾಗಿ ಭಾರತದ ಆಸ್ಪತ್ರೆಗಳಿಗೆ ಆಮ್ಲಜನಕ ಸರಬರಾಜು ಖರೀದಿಸಲು ನಾನು ಈ ಕೊಡುಗೆ ನೀಡುತ್ತಿದ್ದೇನೆ ಎಂದಿದ್ದಾರೆ.
2020 ರಲ್ಲಿ ಕೆಕೆಆರ್ 15.5 ಕೋಟಿ ರೂ.ಗೆ ಇವರನ್ನು ಖರೀದಿಸಿತ್ತು, ಈ ಬಾರಿ ಕಮ್ಮಿನ್ಸ್ ಆ ತಂಡದ ಅವಿಭಾಜ್ಯ ಸದಸ್ಯರಾಗಿದ್ದಾರೆ. ಐಪಿಎಲ್ 2021 ರಲ್ಲಿ ಕೆಕೆಆರ್ ಪರ ಈ ಬೌಲರ್ ಎಲ್ಲಾ 5 ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ.
ದೇಶದಲ್ಲಿ ಐಪಿಎಲ್ ಆಚೆಗಿನ ಜನರ ನೋವನ್ನು ನೋಡುವುದಕ್ಕೆ ಬೇಸರವಾಗಿದೆ ಎಂದಿದ್ದಾರೆ.
“ಭಾರತವು ನಾನು ವರ್ಷಗಳಿಂದ ಪ್ರೀತಿಸುವ ದೇಶವಾಗಿದೆ ಮತ್ತು ಇಲ್ಲಿನ ಜನರು ನಾನು ಭೇಟಿಯಾದ ಅತ್ಯಂತ ಸಹಾನುಭೂತಿ ಹೊಂದಿರುವವರು. ಪ್ರಸ್ತುತ ಕೋವಿಡ್ ಕಾರಣದಿಂದಾಗಿ ಅನೇಕರು ತುಂಬಾ ಬಳಲುತ್ತಿದ್ದಾರೆಂದು ತಿಳಿದುಬಂದಿದ್ದು, ಈ ಸಮಯದಲ್ಲಿ ನನಗೆ ತುಂಬಾ ದುಃಖ ತಂದಿದೆ” ಎಂದು ಕಮ್ಮಿನ್ಸ್ ಹೇಳಿದ್ದಾರೆ.
“ಕೋವಿಡ್ -19 ಸೋಂಕಿನ ಪ್ರಮಾಣ ಹೆಚ್ಚಿರುವಾಗ ಐಪಿಎಲ್ ಮುಂದುವರಿಯುವುದು ಸೂಕ್ತವೇ ಎಂಬ ಬಗ್ಗೆ ಇಲ್ಲಿ ಸಾಕಷ್ಟು ಚರ್ಚೆಗಳು ನಡೆದಿವೆ. ಜನ ಲಾಕ್ಡೌನ್ನಲ್ಲಿರುವಾಗ ಐಪಿಎಲ್ ಆಡುವುದು ದೇಶಕ್ಕೆ ಕಷ್ಟದ ಸಮಯದಲ್ಲಿ ಪ್ರತಿದಿನ ಕೆಲವು ಗಂಟೆಗಳ ಸಂತೋಷ ಮತ್ತು ವಿಶ್ರಾಂತಿ ನೀಡುತ್ತದೆ ಎಂಬ ಅಭಿಪ್ರಾಯ ಸರ್ಕಾರದಲ್ಲಿದೆ ಎಂದು ನನಗೆ ಹೇಳಲಾಗಿದೆ “ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.