ಬೆಂಗಳೂರು: ಕೊರೋನಾ ಸೋಂಕು ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದು ಖಾಸಗಿ ಅಸ್ಪತ್ರೆಗಳು 75% ಹಾಸಿಗೆಗಳನ್ನು ಕೊರೋನಾ ಸೋಂಕಿತರಿಗೆ ನೀಡಬೇಕು ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ.
ಜೊತೆಗೆ ಕೊರೋನಾ ಪಾಸಿಟಿವ್ ವರದಿ ಬಂದವರಿಗೆಲ್ಲಾ ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುವುದಕ್ಕೆ ಅವಕಾಶ ನೀಡುವುದಲ್ಲ. ಬದಲಾಗಿ ವಿಪರೀತವಾಗಿ ಕೊರೋನಾ ಸೋಂಕು ಹೆಚ್ಚಾಗಿರುವ ರೋಗಿಗಳಿಗೆ ಆಸ್ಪತ್ರೆಗಲ್ಲಿ ಚಿಕಿತ್ಸೆ ಪಡೆಯುವುದಕ್ಕೆ ಅವಕಾಶ ನೀಡಬೇಕು. ಯಾವುದೇ ಪ್ರಭಾವಗಳಿಗೂ ಮಣಿಯದೆ ಈ ನಿಯಮವನ್ನು ಆಸ್ಪತ್ರೆಗಳು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ತಿಳಿಸಿದ್ದಾರೆ.
ಇನ್ನು ಖಾಸಗಿ ಅಸ್ಪತ್ರೆಗಳಲ್ಲಿ ಬೆಡ್ ಉಸ್ತುವಾರಿ ನೋಡಿಕೊಳ್ಳುವುದಕ್ಕೆ ಸರ್ಕಾರದ ವತಿಯಿಂದಲೇ ಅಧಿಕಾರಿಗಳನ್ನು ನೇಮಕ ಮಾಡಲಾಗುತ್ತದೆ. ಅಲ್ಲದೆ ಮನೆಯಲ್ಲಿ ಕುಟುಂಬ ಸದಸ್ಯರ ಸಂಖ್ಯೆ ಹೆಚ್ಚಿರುವಲ್ಲಿ ಅವರಿಗೆ ಮನೆಯಲ್ಲೇ ಸೂಕ್ತ ಚಿಕಿತ್ಸೆ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ. ರಾಜ್ಯದಲ್ಲಿಯೂ ಕೊರೋನಾ ನಿಯಂತ್ರಣಕ್ಕೆ ಯುಕೆ ಮಾದರಿಯ ಕ್ರಮ ಕೈಗೊಳ್ಳಲಾಗುವುದು. ಸಹಾಯವಾಣಿ ಮೂಲಕ ಅವರಿಗೆ ಧೈರ್ಯ ತುಂಬುವುದು, ಚಿಕಿತ್ಸೆ ನೀಡುವುದು ಮೊದಲಾದ ಕ್ರಮಗಳನ್ನು ಅಳವಡಿಸಿಕೊಲ್ಳುವ ಮೂಲಕ ಸಾವಿನ ಪ್ರಮಅಣ ಕಡಿಮೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಕೊರೋನಾವನ್ನು ಆತ್ಮಸ್ಥೈರ್ಯದಿಂದ ಎದುರಿಸುವಂತೆ, ಆ ಮೂಲಕ ಕೊರೋನಾ ಗೆಲ್ಲುವಂತೆ ಜನರಿಗೂ ಸುಧಾಕರ್ ಕಿವಿಮಾತು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.