ಮಥುರಾ: ಸ್ವಾತಂತ್ರ್ಯ ದಿನದಂದು ತಮಗೆ ಆತ್ಮಹತ್ಯೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿ ಮಥುರಾದ 25 ಸಾವಿರ ರೈತರು ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರಿಗೆ ಪತ್ರ ಬರೆದಿದ್ದಾರೆ.
ಮಥುರಾದ ಮಹವನ್ ಪ್ರದೇಶದಲ್ಲಿನ ಯಮುನಾ ನದಿಯ ಗೋಕುಲ್ ಬ್ಯಾರೇಜ್ ಕ್ಯಾಚ್ಮೆಂಟ್ ಏರಿಯಾಗೆ ಈ ರೈತರು ತಮ್ಮ ಭೂಮಿ ಕಳೆದುಕೊಂಡಿದ್ದಾರೆ. ಇದಕ್ಕೆ ಪರಿಹಾರ ಕೊಡಬೇಕೆಂಬುದು ಈ ರೈತರು ಹಲವಾರು ದಿನಗಳಿಂದ ಒತ್ತಾಯಿಸುತ್ತಿದ್ದಾರೆ.
ಆದರೆ ಯಾವ ಸರ್ಕಾರವೂ ಇವರ ಒತ್ತಾಯವನ್ನು ಪುರಸ್ಕರಿಸಿಲ್ಲ. ಅಂಕಿಅಂಶದ ಪ್ರಕಾರ ಈ ರೈತರಿಗೆ 800 ಕೋಟಿ ಪರಿಹಾರ ನೀಡಬೇಕಾಗಿದೆ. ಆದರೆ ಇದುವರೆಗೆ ಅದು ಬಂದಿಲ್ಲ. ಹೀಗಾಗಿ ಅವರು ಆತ್ಮಹತ್ಯೆಗೆ ಅವಕಾಶ ಕೊಡಬೇಕೆಂದು ರಾಷ್ಟ್ರಪತಿಗಳಿಗೆ ಆಗ್ರಹಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.