News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮೋದಿ ಮಹತ್ವದ ಸಭೆ: ಜನರ ಸಂಪರ್ಕದಲ್ಲಿರುವಂತೆ ಸಚಿವರಿಗೆ ಕರೆ

ನವದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ಕರೋನವೈರಸ್ ಪ್ರಕರಣಗಳ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಕೇಂದ್ರ ಸಚಿವರೊಂದಿಗೆ ಸಭೆ ನಡೆಸಿದರು. ಶುಕ್ರವಾರ ಮಧ್ಯಾಹ್ನ ನಡೆದ ಈ ಸಭೆ ದೇಶದಲ್ಲಿ ಎರಡನೇ ಕೊರೋನಾ ಅಲೆ ಕಾಣಿಸಿಕೊಂಡ ನಂತರದ ಮೊದಲ ಸಚಿವ ಮಂಡಳಿ  ಸಭೆಯಾಗಿದೆ.

ಸಚಿವರುಗಳು ಆಯಾ ಪ್ರದೇಶದ ಜನರೊಂದಿಗೆ ಸಂಪರ್ಕದಲ್ಲಿರಬೇಕು ಮತ್ತು ಜನರಿಗೆ ಬೇಕಾದ ಸಹಾಯ ಮಾಡಬೇಕು ಮತ್ತು ಜನರಿಂದ ಪ್ರತಿಕ್ರಿಯೆಯನ್ನು ಪಡೆಯಬೇಕು ಎಂದು ಪ್ರಧಾನಿ ಆಗ್ರಹಿಸಿದ್ದಾರೆ. ಸ್ಥಳೀಯ ಮಟ್ಟದಲ್ಲಿ ಸಮಸ್ಯೆಗಳನ್ನು ತ್ವರಿತವಾಗಿ ಗುರುತಿಸಿ ಪರಿಹರಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳುವ ಅಗತ್ಯವನ್ನು ಅವರು ಒತ್ತಿ ಹೇಳಿದ್ದಾರೆ.

“ದೇಶದ ಎರಡನೇ ಕೋವಿಡ್‌ ಅಲೆಯಿಂದ ಉಂಟಾದ ಭೀತಿ ಪರಿಸ್ಥಿತಿ ಕುರಿತು ಚರ್ಚಿಸಲು ಸಚಿವರ ಮಂಡಳಿ ಇಂದು ಸಭೆ ಸೇರಿತು. ಪರಿಸ್ಥಿತಿಯನ್ನು ಎದುರಿಸಲು ಸರ್ಕಾರದ ಎಲ್ಲಾ ಅಂಗಗಳು ಒಗ್ಗಟ್ಟಿನಿಂದ ಮತ್ತು ವೇಗವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು” ಎಂದು ಮಾಹಿತಿ ಸಚಿವಾಲಯ ಮತ್ತು ಪ್ರಸಾರವು ಹೇಳಿಕೆಯಲ್ಲಿ ತಿಳಿಸಿದೆ.

“ವೈದ್ಯಕೀಯ ಆಮ್ಲಜನಕದ ಲಭ್ಯತೆ ಮತ್ತು ಪೂರೈಕೆಗೆ ಸಂಬಂಧಿಸಿದಂತೆ ಆರೋಗ್ಯ ಸಚಿವಾಲಯವು ರಾಜ್ಯಗಳೊಂದಿಗೆ ನಿಕಟವಾಗಿ ಸಮನ್ವಯ ಸಾಧಿಸುತ್ತಿದೆ. 23 ರಾಜ್ಯಗಳಿಗೆ 8,593 ಮೆ.ಟನ್ ಆಮ್ಲಜನಕ ಹಂಚಿಕೆ ಮಾಡಲಾಗಿದೆ” ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

“ಖಾಸಗಿ ಆಸ್ಪತ್ರೆಗಳು ಸೇರಿದಂತೆ ಎಲ್ಲಾ ಆಸ್ಪತ್ರೆಗಳಲ್ಲಿ ಆಮ್ಲಜನಕದ ಬಳಕೆಯ ಲೆಕ್ಕಪರಿಶೋಧನೆಯನ್ನು ಕೈಗೊಳ್ಳಲು ರಾಜ್ಯಗಳಿಗೆ ಸೂಚಿಸಲಾಗಿದೆ” ಎಂದು ಅದು ಹೇಳಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top