ನವದೆಹಲಿ: 400 ನೇ ಪ್ರಕಾಶ್ ಪುರಬ್ ವಿಶೇಷ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗುರುದ್ವಾರ ಸಿಸ್ ಗಂಜ್ ಸಾಹಿಬ್ಗೆ ಶನಿವಾರ ಬೆಳಿಗ್ಗೆ ಭೇಟಿ ನೀಡಿದರು.
ಪಿಎಂ ಮೋದಿ ಅವರು ಈ ಬಗ್ಗೆ ಟ್ವಿಟ್ ಮಾಡಿ, “ಈ ವಿಶೇಷ ಸಂದರ್ಭದಲ್ಲಿ ಶ್ರೀ ಗುರು ತೇಜ್ ಬಹದ್ದೂರ್ ಜಿ ಅವರಿಗೆ ತಲೆಬಾಗಿ ನಮಸ್ಕರಿಸುತ್ತೇನೆ” ಎಂದಿದ್ದಾರೆ.
“ಧೈರ್ಯ ಮತ್ತು ದೀನ ದಲಿತರಿಗೆ ಸೇವೆ ಸಲ್ಲಿಸಿದ ಪ್ರಯತ್ನಗಳಿಗಾಗಿ ಜಾಗತಿಕವಾಗಿ ಅವರನ್ನು ಗೌರವಿಸಲಾಗುತ್ತದೆ. ದಬ್ಬಾಳಿಕೆ ಮತ್ತು ಅನ್ಯಾಯಕ್ಕೆ ತಲೆಬಾಗಲು ಅವರು ನಿರಾಕರಿಸಿದರು. ಅವರ ಸರ್ವೋಚ್ಚ ತ್ಯಾಗ ಅನೇಕರಿಗೆ ಶಕ್ತಿ ಮತ್ತು ಪ್ರೇರಣೆ ನೀಡುತ್ತದೆ” ಎಂದಿದ್ದಾರೆ.
“ಶ್ರೀ ಗುರು ತೇಜ್ ಬಹದ್ದೂರ್ ಜಿ ಅವರ ಜೀವನ, ಆದರ್ಶಗಳು ಮತ್ತು ಸರ್ವೋಚ್ಚ ತ್ಯಾಗವನ್ನು ನಾವು ಎಂದಿಗೂ ಮರೆಯಲು ಸಾಧ್ಯವಿಲ್ಲ” ಎಂದಿದ್ದಾರೆ.
ಒಂಬತ್ತನೇ ಸಿಖ್ ಗುರುವನ್ನು ಮೊಘಲರು 1675 ರಲ್ಲಿ ಶಿರಚ್ಛೇಧ ಮಾಡಿದ ಸ್ಥಳವಾದ್ದರಿಂದ ಗುರುದ್ವಾರ ಸಿಸ್ ಗಂಜ್ ವಿಶೇಷವಾಗಿದೆ.
ಪ್ರಕಾಶ್ ಪುರಬ್ ಗುರು ತೇಜ್ ಬಹದ್ದೂರ್ ಅವರ ಜನ್ಮ ದಿನಾಚರಣೆ.
Prayed at Gurudwara Sis Ganj Sahib today.
We can never forget the life, ideals and supreme sacrifice of Sri Guru Teg Bahadur Ji. pic.twitter.com/62teTxLJsp
— Narendra Modi (@narendramodi) May 1, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.