News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮಿತಿ ಮೀರಿದ ಟಿಎಂಸಿ ಹಿಂಸಾಚಾರ: ಪಶ್ಚಿಮಬಂಗಾಳ ಸರ್ಕಾರದಿಂದ ವರದಿ ಕೇಳಿದ ಕೇಂದ್ರ

ನವದೆಹಲಿ: ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ ಪಶ್ಚಿಮಬಂಗಾಳ ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಕೇಂದ್ರ ಗೃಹ ಸಚಿವಾಲಯ ಪಶ್ಚಿಮ ಬಂಗಾಳ ಸರ್ಕಾರದಿಂದ ವರದಿ ಕೋರಿದೆ. ರಾಜ್ಯದ ಹಲವಾರು ಭಾಗಗಳಲ್ಲಿ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ಹಿಂಸಾಚಾರದಲ್ಲಿ ಅನೇಕ ಜನರು ಸಾವನ್ನಪ್ಪಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ.

ಚುನಾವಣಾ ಫಲಿತಾಂಶದ ನಂತರ ಬಿಜೆಪಿ ಅಭ್ಯರ್ಥಿಗಳ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ಗೃಹ ಸಚಿವಾಲಯ ಬಂಗಾಳ ಸರ್ಕಾರಕ್ಕೆ ಪತ್ರ ಬರೆದಿದೆ.

ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ಹಿಂಸಾಚಾರ ನಡೆದಿದೆ ಮತ್ತು ಬೆಂಕಿ ಹಾಕಿ ಮನೆಗಳನ್ನು ಸುಟ್ಟುಹಾಕಲಾಗಿದೆ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಬಿಜೆಪಿ ನಾಯಕರ ಆಸ್ತಿಪಾಸ್ತಿಗೆ ಹಾನಿಯುಂಟು ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಪೂರ್ವ ಬರ್ಧಾಮನ್ ಜಿಲ್ಲೆಯ ಜಮಾಲ್‌ಪುರದಲ್ಲಿ ಬಿಜೆಪಿ ಮತ್ತು ಟಿಎಂಸಿ ನಡುವಿನ ಘರ್ಷಣೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಕೆಲವು ಟಿಎಂಸಿ ಬೆಂಬಲಿಗರು ಬಿಜೆಪಿ ಪಕ್ಷದ ಕಾರ್ಯಕರ್ತ ಆಸಿಸ್ ದಸ್ತಿದಾರ್ ಅವರ ಮನೆಯನ್ನು ಧ್ವಂಸ ಮಾಡಲು ಪ್ರಾರಂಭಿಸಿದ ನಂತರ ಘರ್ಷಣೆ ಭುಗಿಲೆದ್ದಿದೆ ಎಂದು ಬಿಜೆಪಿ ಹೇಳಿಕೊಂಡಿದೆ. ಘರ್ಷಣೆಯ ಸಂದರ್ಭದಲ್ಲಿ ಅವರ ತಾಯಿ ಕಾಕಲಿ ದಸ್ತಿದಾರ್ ಕೂಡ ಸಾವನ್ನಪ್ಪಿದ್ದಾರೆ. ಕೆಲವು ಬಿಜೆಪಿ ಅಭ್ಯರ್ಥಿಗಳ ಮನೆಗಳು ಮತ್ತು ವಾಹನಗಳ ಮೇಲೆ ದಾಳಿ ನಡೆಸಲಾಗಿದೆ, ಅರಂಬಾಗ್‌ನಲ್ಲಿರುವ ಪಕ್ಷದ ಕಚೇರಿಗೆ ಬೆಂಕಿ ಹಚ್ಚಲಾಗಿದೆ.

ನಂದಿಗ್ರಾಮ್‌ನಲ್ಲಿ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿಯನ್ನು ಸೋಲಿಸಿದ ಸುವೇಂದು ಅಧಿಕಾರಿಯವರ ವಾಹನದ ಮೇಲೂ ದಾಳಿ ನಡೆಸಲಾಗಿದೆ. ತೃಣಮೂಲ ಕಾರ್ಯಕರ್ತರ ಹಿಂಸಾಚಾರದವನ್ನು ಬಿಜೆಪಿ ಕಟುವಾಗಿ ಖಂಡಿಸಿದೆ, ಆದರೆ ಆಡಳಿತ ಪಕ್ಷದ ಮುಖಂಡರು ಈ ಘಟನೆಗಗೂ ನಮಗೂ ಯಾವುದೇ ಸಂಬಂಧವಿಲ್ಲ ಎನ್ನುತ್ತಿದ್ದಾರೆ.. ನಟಬರಿಯಲ್ಲಿ, ಬಿಜೆಪಿ ಅಭ್ಯರ್ಥಿ ಮಿಹಿರ್ ಗೋಸ್ವಾಮಿ ಅವರ ಕಾರು ಕೂಡ ಹಾನಿಯಾಗಿದೆ. ಅದೇ ಕ್ಷೇತ್ರದ ಹಿರಿಯ ಟಿಎಂಸಿ ನಾಯಕ ರವೀಂದ್ರನಾಥ ಘೋಷ್ ವಿರುದ್ಧ ಅವರು ಜಯಗಳಿಸಿದ್ದರು. ಪಕ್ಷದ ಅಭ್ಯರ್ಥಿ ಮಧುಸೂದನ್ ಬ್ಯಾಗ್ ಟಿಎಂಸಿಯ ಸುಜಾತಾ ಮೊಂಡಾಲ್ ಅವರನ್ನು ಸುಮಾರು 7,100 ಮತಗಳಿಂದ ಸೋಲಿಸಿದ ನಂತರ ಅರಂಬಾಗ್‌ನಲ್ಲಿರುವ ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಲಾಗಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top