News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಪ.ಬಂಗಾಳದಲ್ಲಿ ಟಿಎಂಸಿ ಹಿಂಸಾಚಾರ ಖಂಡಿಸಿ ಮೇ 5ಕ್ಕೆ ಬಿಜೆಪಿಯಿಂದ ದೇಶವ್ಯಾಪಿ ಧರಣಿ

ನವದೆಹಲಿ: ಇತ್ತೀಚೆಗೆ ನಡೆದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ ಕೂಡಲೇ ತೃಣಮೂಲ ಕಾಂಗ್ರೆಸ್ ವ್ಯಾಪಕ ಹಿಂಸಾಚಾರದಲ್ಲಿ ತೊಡಗಿದೆ. ಬಿಜೆಪಿ ಕಾರ್ಯಕರ್ತರ ಮೇಲೆ ಹಿಂಸೆ ನಡೆಸಲಾಗುತ್ತಿದ್ದು, ಈಗಾಗಲೇ ಅನೇಕ ಬಿಜೆಪಿ ಕಾರ್ಯಕರ್ತರು ಅಸುನೀಗಿದ್ದಾರೆ.

ಈ ಹಿನ್ನೆಲೆಯಲ್ಲಿ ಬಿಜೆಪಿ ಮೇ 5 ರಂದು ರಾಷ್ಟ್ರವ್ಯಾಪಿ ಧರಣಿ ಘೋಷಿಸಿದೆ. ಕೋವಿಡ್‌ ನಿಯಮಗಳನ್ನು ಪಾಲಿಸುತ್ತಾ ಈ ಧರಣಿ ನಡೆಯಲಿದೆ.

ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರು ಮೇ 4ರಿಂದ ಎರಡು ದಿನಗಳ ಕಾಲ ಪಶ್ಚಿಮ ಬಂಗಾಳದಲ್ಲಿ ಇದ್ದು ಹಿಂಸೆಯಿಂದ ಪೀಡಿತರಾದ ಬಿಜೆಪಿ ಕಾರ್ಯಕರ್ತರು ಮತ್ತು ಕುಟುಂಬದವರನ್ನು ಭೇಟಿಯಾಗಲಿದ್ದಾರೆ. ಪ್ರಜಾಪ್ರಭುತ್ವದ ಅನುಸಾರ ಹಿಂಸೆಯನ್ನು ವಿರೋಧಿಸಲಿದ್ದಾರೆ.

“ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಫಲಿತಾಂಶವನ್ನು ಪ್ರಕಟಿಸಿದ ಟಿಎಂಸಿ ಕಾರ್ಮಿಕರು ನಡೆಸುತ್ತಿರುವ ವ್ಯಾಪಕ ಹಿಂಸಾಚಾರದ ವಿರುದ್ಧ ಬಿಜೆಪಿ ಮೇ 5 ರಂದು ರಾಷ್ಟ್ರವ್ಯಾಪಿ ಧರಣಿ ಘೋಷಿಸಿದೆ. ಬಿಜೆಪಿಯ ಎಲ್ಲಾ ಸಾಂಸ್ಥಿಕ ಮಂಡಳಿಗಳಲ್ಲಿನ ಎಲ್ಲಾ ಕೋವಿಡ್ ಪ್ರೋಟೋಕಾಲ್‌ಗಳನ್ನು ಅನುಸರಿಸಿ ಈ ಪ್ರತಿಭಟನೆ ನಡೆಯಲಿದೆ ”ಎಂದು ಪಕ್ಷವು ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಿದೆ.

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಸರಕಾರದ ಅಡಿಯಲ್ಲಿ ಇದುವರೆಗೆ 140 ಬಿಜೆಪಿ ಕಾರ್ಯಕರ್ತರ ಪ್ರಾಣ ಹೋಗಿದೆ. ಆದರೆ ರಾಜ್ಯ ಸರಕಾರ ಇಲ್ಲಿಯವರೆಗೂ ಕಣ್ಣುಮುಚ್ಚಿ ಕುಳಿತಿದೆ. ಚುನಾವಣಾ ಫಲಿತಾಂಶ ಪ್ರಕಟವಾದ 24 ಗಂಟೆಗಳೊಳಗೆ ಬಿಜೆಪಿ ಅನೇಕ ಕಾರ್ಯಕರ್ತರ ಕೊಲೆ ನಡೆದಿರುವುದು ನಿಜಕ್ಕೂ ದುರಾದೃಷ್ಟಕರ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top