News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಹಿಂಸೆಯಿಂದ ತಪ್ಪಿಸಿಕೊಳ್ಳಲು ಅಸ್ಸಾಂಗೆ ತೆರಳುತ್ತಿದ್ದಾರೆ ಪ.ಬಂಗಾಳ ಬಿಜೆಪಿ ಕಾರ್ಯಕರ್ತರು

ಗುವಾಹಟಿ: ಟಿಎಂಸಿ ಪಕ್ಷದ ಗೂಂಡಾಗಳು ನಡೆಸುತ್ತಿರುವ ಹಿಂಸಾಚಾರದಿಂದ ತಪ್ಪಿಸಿಕೊಳ್ಳಲು ಸುಮಾರು 400 ಬಿಜೆಪಿ ಕಾರ್ಯಕರ್ತರು ಮತ್ತು ಅವರ ಕುಟುಂಬಗಳು ಅಸ್ಸಾಂಗೆ ಪ್ರವೇಶಿಸಿದ್ದಾರೆ ಎಂದು ಅಸ್ಸಾಂ ಸಚಿವ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.

ಬಂಗಾಳದ ಕೆಲವು ಭಾಗಗಳಲ್ಲಿ ಭುಗಿಲೆದ್ದ ಹಿಂಸಾಚಾರದಲ್ಲಿ ಕಳೆದ ಎರಡು ದಿನಗಳಲ್ಲಿ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಬಂಗಾಳ ರಾಜ್ಯಪಾಲ ಜಗದೀಪ್ ಧಂಕರ್ ಅವರೊಂದಿಗೆ ಮಾತನಾಡಿ ಪರಿಸ್ಥಿತಿ ಬಗ್ಗೆ ಚರ್ಚಿಸಿದ್ದಾರೆ.

ಹಿಂಸಾಚಾರದ ಬಗ್ಗೆ ಕೇಂದ್ರ ಗೃಹ ಸಚಿವಾಲಯ ವರದಿ ಕೇಳಿದೆ.

ಬಂಗಾಳ ಬಿಜೆಪಿಗರು ಅಸ್ಸಾಂಗೆ ಬಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಸ್ವಾ, “ದುಃಖಕರ ಬೆಳವಣಿಗೆಯಲ್ಲಿ 300-400 ಬಂಗಾಳದ  ಬಿಜೆಪಿ  ಕಾರ್ಯಕರ್ತರು ಮತ್ತು ಕುಟುಂಬ ಸದಸ್ಯರು  ಕಿರುಕುಳ ಮತ್ತು ಹಿಂಸಾಚಾರವನ್ನು ಎದುರಿಸಿದ ನಂತರ ಅಸ್ಸಾಂನ ಧುಬ್ರಿಗೆ ಬಂದಿದ್ದಾರೆ” ಎಂದು  ಹೇಳಿದ್ದಾರೆ.

“ನಾವು ಅವರಿಗೆ ಆಶ್ರಯ ಮತ್ತು ಆಹಾರವನ್ನು ನೀಡುತ್ತಿದ್ದೇವೆ. -ಮಮತಾ ಈ ರಾಕ್ಷಸಿ ಕೃತ್ಯವನ್ನು ನಿಲ್ಲಿಸಬೇಕು! ಬಂಗಾಳವು ಉತ್ತಮವಾದುದಕ್ಕೆ ಅರ್ಹವಾಗಿದೆ” ಎಂದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top