News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

‘ಪಿಎಂ-ಕೇರ್ಸ್’ ನಿಧಿಗೆ 10 ಕೋಟಿ ರೂಪಾಯಿಗಳ ದೇಣಿಗೆ ನೀಡಿದ ಹಾರ್ಮನ್ ಕಂಪನಿ

ನವದೆಹಲಿ: ಕೋವಿಡ್-19 ವಿರುದ್ಧದ ಹೋರಾಟವನ್ನು ಮುನ್ನಡೆಸುವ ಸಲುವಾಗಿ ‘ಪಿಎಂ-ಕೇರ್ಸ್’ ನಿಧಿಗೆ ಹಾರ್ಮನ್ ಕಂಪನಿಯು 10 ಕೋಟಿ ರೂಪಾಯಿಗಳ ನೆರವನ್ನು ನೀಡಿದೆ.

ಕಾರ್ಪೋರೇಟ್ ಸಾಮಾಜಿಕ ಜವಾಬ್ದಾರಿ ಅಡಿಯಲ್ಲಿ ಕಂಪನಿಯು ಈ ನೆರವನ್ನು ನೀಡಿದೆ.

“ಕೋವಿಡ್ ಸಾಂಕ್ರಾಮಿಕ ರೋಗವನ್ನು ಎದುರಿಸಲು ನಾವು ಸರಕಾರಕ್ಕೆ ಬೆಂಬಲ ನೀಡುತ್ತಿದ್ದೇವೆ. ಇದಕ್ಕಾಗಿ ಪಿಎಂ ಕೇರ್ಸ್‌ಗೆ ದೇಣಿಗೆಯನ್ನು ನೀಡಿದ್ದೇವೆ” ಎಂದು ಹಾರ್ಮನ್ ಕಂಪನಿಯ ಭಾರತದ ವ್ಯವಸ್ಥಾಪಕ ನಿರ್ದೇಶಕ ಪ್ರತಾಪ್ ದೇವನಾಯಗಂ ತಿಳಿಸಿದ್ದಾರೆ.

ಈಗಾಗಲೇ ಭಾರತದಲ್ಲಿನ 8400 ಉದ್ಯೋಗಿಗಳು ಮತ್ತು ಅವರ ಕುಟುಂಬ ಸದಸ್ಯರ ಲಸಿಕೆ ವೆಚ್ಚವನ್ನು ಭರಿಸುವುದಾಗಿ ಕಂಪನಿ ಘೋಷಣೆ ಮಾಡಿದೆ.

ಅಲ್ಲದೆ ತನ್ನ ಉದ್ಯೋಗಿಗಳಿಗೆ ವೈದ್ಯಕೀಯ ಚಿಕಿತ್ಸೆ ನೀಡಲು ಹಾರ್ಮನ್ ಕಂಪನಿಯು ಅಪೋಲೋ ಆಸ್ಪತ್ರೆ ಜೊತೆ ಒಪ್ಪಂದ ಮಾಡಿಕೊಂಡಿದೆ. ವಿಮಾ ವ್ಯಾಪ್ತಿಯನ್ನು ಕೂಡ ವಿಸ್ತರಣೆ ಮಾಡಿದೆ, ವೈದ್ಯಕೀಯ ತುರ್ತು ಪರಿಸ್ಥಿತಿಗಳಲ್ಲಿ ಹಣಕಾಸಿನ ನೆರವು ನೀಡುತ್ತಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top