News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಹಿಂಸಾಚಾರದ ವರದಿ ಪಡೆಯಲು ಪಶ್ಚಿಮಬಂಗಾಳಕ್ಕೆ ಕೇಂದ್ರ ಗೃಹಸಚಿವಾಲಯದ ತಂಡ

ನವದೆಹಲಿ: ಪಶ್ಚಿಮಬಂಗಾಳ  ರಾಜ್ಯದಲ್ಲಿ ಚುನಾವಣಾ ಫಲಿತಾಂಶದ ನಂತರದ ಭುಗಿಲೆದ್ದ ಹಿಂಸಾಚಾರದ ಬಗ್ಗೆ ವರದಿಗಳನ್ನು ಪಡೆಯುವ ಸಲುವಾಗಿ ಕೇಂದ್ರ ಗೃಹ ಸಚಿವಾಲಯದ ನಾಲ್ಕು ಸದಸ್ಯರ ತಂಡ ಶುಕ್ರವಾರ  ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧಂಖರ್ ಅವರನ್ನು ರಾಜ್ ಭವನದಲ್ಲಿ ಭೇಟಿ ಮಾಡಿತು.

ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಗೋವಿಂದ್ ಮೋಹನ್ ನೇತೃತ್ವದ ತಂಡವು ಕೋಲ್ಕತ್ತಾದ ರಾಜ್ ಭವನದಲ್ಲಿ ಧಂಖರ್ ಅವರನ್ನು ಭೇಟಿ ಮಾಡಿದೆ.

ಈ ತಂಡವು ಗುರುವಾರ ರಾಜ್ಯಕ್ಕೆ ಆಗಮಿಸಿ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಡಿಜಿಪಿಯೊಂದಿಗೆ  ಸಭೆ ನಡೆಸಿದೆ ಎಂದು ಪಿಟಿಐ ವರದಿ ಮಾಡಿದೆ.

ಮೇ 6 ರಂದು ಗೃಹ ಸಚಿವಾಲಯವು ಪಶ್ಚಿಮ ಬಂಗಾಳ ರಾಜ್ಯಪಾಲರಿಗೆ ರಾಜ್ಯದ ಕಾನೂನು ಸುವ್ಯವಸ್ಥೆ ಕುರಿತು ವರದಿ ನೀಡುವಂತೆ ಕೇಳಿಕೊಂಡಿತ್ತು.

ವರದಿಯನ್ನು ಸಲ್ಲಿಸುವಂತೆ ಗೃಹ ಸಚಿವಾಲಯವು ರಾಜ್ಯ ಸರ್ಕಾರವನ್ನು ಕೇಳಿಕೊಂಡಿತ್ತು. “ಪರಿಸ್ಥಿತಿಯನ್ನು ಅಂದಾಜು ಮಾಡಲು ಮತ್ತು ತಮ್ಮ ವರದಿಯನ್ನು ಶೀಘ್ರವಾಗಿ ಸಚಿವಾಲಯಕ್ಕೆ ಸಲ್ಲಿಸಲು ರಾಜ್ಯಪಾಲರನ್ನು ಕೇಳಲಾಗಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top