News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಧಾರವಾಡ‌ದಲ್ಲಿ 4 ಆಕ್ಸಿಜನ್ ಉತ್ಪಾದನಾ ಘಟಕ ಸ್ಥಾಪನೆಗೆ ಕೇಂದ್ರ ಸರ್ಕಾರ ಅನುಮೋದನೆ

ಹುಬ್ಬಳ್ಳಿ: ನಗರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರ‌ದ ಅಧೀನದಲ್ಲಿರುವ ಸಾರ್ವಜನಿಕ ಉದ್ಯಮಗಳಿಂದ ಧಾರವಾಡ ಜಿಲ್ಲೆಗೆ 4 ಆಮ್ಲಜನಕ ಉತ್ಪಾದನಾ ಘಟಕಗಳ ಸ್ಥಾಪನೆಗೆ ಅನುಮೋದನೆ ದೊರೆತಿದೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ ಅವರಿಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಪತ್ರ ಮುಖೇನ ಮನವಿ ಸಲ್ಲಿಸಿದ್ದರು.

ಇದಕ್ಕೆ ಸಕಾರಾತ್ಮಕ ಸ್ಪಂದನೆ ನೀಡಿರುವ ಧರ್ಮೇಂದ್ರ ಪ್ರಧಾನ್ ಅವರು, ಕೇಂದ್ರದ ಅಧೀನದಲ್ಲಿರುವ ಎಂಆರ್‌ಪಿಎಲ್, ಒಎನ್‌ಜಿಸಿ ಮತ್ತು ಎನ್‌ಎಂಡಿಸಿ ಸಂಸ್ಥೆಗಳಿಗೆ ಆದೇಶ ನೀಡಿದ್ದು, ಧಾರವಾಡ ಜಿಲ್ಲೆಯಲ್ಲಿ4 ಆಕ್ಸಿಜನ್ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ಅನುಮೋದಿಸಿದ್ದಾರೆ.

ಇವುಗಳಲ್ಲಿ 3 ಘಟಕಗಳನ್ನು ಕಿಮ್ಸ್‌ನಲ್ಲಿ ಮತ್ತು ಒಂದು ಘಟಕವನ್ನು ಜಿಲ್ಲಾ ಸಿವಿಲ್ ಆಸ್ಪತ್ರೆಯಲ್ಲಿ ಆರಂಭಿಸಲಾಗುತ್ತದೆ. ಈ ಘಟಕಗಳು ಪ್ರತಿ ನಿಮಿಷ‌ಕ್ಕೆ 1000 ಲೀ. ಆಮ್ಲಜನಕ ಉತ್ಪಾದಿಸಲಿವೆ. ಇವುಗಳ ಸ್ಥಾಪನೆಯಿಂದ ಜಿಲ್ಲೆಯಲ್ಲಿ ಆಕ್ಸಿಜನ್‌ಗಾಗಿ ಅವಲಂಬನೆ ತಪ್ಪಲಿದೆ. ಜೊತೆಗೆ 24*7 ಸೇವೆಗೂ ಇದು ಅನುಕೂಲ ಒದಗಿಸಲಿದೆ. ಸಾಗಾಟ ವೆಚ್ಚ, ಸಮಯ ಉಳಿತಾಯಕ್ಕೂ ಇದು ಪೂರಕವಾಗಲಿದೆ.

ಇನ್ನು ಈ ತ್ವರಿತ ಪ್ರಗತಿಗಾಗಿ ಪ್ರಲ್ಹಾದ ಜೋಶಿ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಧರ್ಮೇಂದ್ರ ಪ್ರಧಾನ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top