News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕಠಿಣ ಕ್ರಮ ಕೈಗೊಂಡರೆ 3 ನೇ ಅಲೆ ಸಂಭವಿಸಲಾರದು: ಸರ್ಕಾರದ ವೈಜ್ಞಾನಿಕ ಸಲಹೆಗಾರ

ನವದೆಹಲಿ: ಕಠಿಣ ಅಗತ್ಯ ಕ್ರಮಗಳನ್ನು ಕೈಗೊಂಡರೆ ಭಾರತವು ಕೊರೋನಾವೈರಸ್‌ನ ಮಾರಕ ಮೂರನೇ ಅಲೆಯಿಂದ ತಪ್ಪಿಸಿಕೊಳ್ಳಬಲ್ಲದು  ಎಂದು ಸರ್ಕಾರದ ಉನ್ನತ ವೈಜ್ಞಾನಿಕ ಸಲಹೆಗಾರ ಶುಕ್ರವಾರ ಹೇಳಿದ್ದಾರೆ.

“ನಾವು ಕಠಿಣವಾದ ಕ್ರಮಗಳನ್ನು ತೆಗೆದುಕೊಂಡರೆ ಮೂರನೆಯ ಅಲೆ ಎಲ್ಲಾ ಪ್ರದೇಶಗಳಲ್ಲಿ ಕಾಣಿಸಿಕೊಳ್ಳಲಾರದು ಅಥವಾ ಎಲ್ಲಿಯೂ ಮೂರನೇ ಅಲೆ ಬಾರದೇ ಇರಬಲ್ಲದು. ಸ್ಥಳೀಯ ಮಟ್ಟದಲ್ಲಿ, ರಾಜ್ಯಗಳಲ್ಲಿ, ಜಿಲ್ಲೆಗಳಲ್ಲಿ ಮತ್ತು ಎಲ್ಲೆಡೆ ನಗರಗಳಲ್ಲಿ ಕೋವಿಡ್‌ ನಿಯಮಗಳನ್ನು ಎಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಲಾಗುತ್ತದೆ ಎಂಬುದರ ಮೇಲೆ ಇದು ಹೆಚ್ಚು ಅವಲಂಬಿತವಾಗಿರುತ್ತದೆ” ಡಾ ಕೆ ವಿಜಯರಾಘವನ್ ಹೇಳಿದ್ದಾರೆ.

“ಈ ವೈರಸ್ ಯಾವ ಮಟ್ಟದಲ್ಲಿ ಹರಡುತ್ತಿದೆ ಎಂಬುದನ್ನು ಗಮನಿಸಿದರೆ 3 ನೇ ಅಲೆ ಅನಿವಾರ್ಯವಾಗಬಲ್ಲದು, ಆದರೆ ಈ  3ನೇ ಅಲೆ ಯಾವ ಸಮಯದಲ್ಲಿ ಸಂಭವಿಸುತ್ತದೆ ಎಂಬುದು ಸ್ಪಷ್ಟವಾಗಿಲ್ಲ” ಎಂದು ಅವರು ಈ ಹಿಂದೆ ಹೇಳಿದ್ದರು. ಆದರೆ ಇಂದು ಕಠಿಣ ಕ್ರಮ ಕೈಗೊಂಡರೆ ಮೂರನೇ ಅಲೆ ಬಾರದಂತೆ ತಡೆಯಬಹುದು ಎಂದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top