ನವದೆಹಲಿ: ಪ್ರಧಾನ್ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಅಡಿಯಲ್ಲಿ ಈವರೆಗೆ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಎರಡು ಕೋಟಿ ಫಲಾನುಭವಿಗಳಿಗೆ ಒಂದು ಲಕ್ಷ ಮೆಟ್ರಿಕ್ ಟನ್ ಆಹಾರ ಧಾನ್ಯಗಳನ್ನು ವಿತರಿಸಲಾಗಿದೆ ಎಂದು ಸರ್ಕಾರ ಹೇಳಿದೆ.
ವರ್ಚುವಲ್ ಪತ್ರಿಕಾಗೋಷ್ಠಿಯ ಮೂಲಕ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯ ಕಾರ್ಯದರ್ಶಿ ಶುದಾನ್ಶು ಪಾಂಡೆ ಅವರು ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಇಲಾಖೆ 2021 ಮೇ ಮತ್ತು ಜೂನ್ ಎರಡು ತಿಂಗಳುಗಳವರೆಗೆ ಪಿಎಂಜಿಕೆಎವೈ-3 ಯೋಜನೆಯ ಅನುಷ್ಠಾನವನ್ನು ಪ್ರಾರಂಭಿಸಿದೆ, ಪ್ರತಿ ವ್ಯಕ್ತಿಗೆ ತಿಂಗಳಿಗೆ 5 ಕಿಲೋಗ್ರಾಂಗಳಷ್ಟು ಹೆಚ್ಚುವರಿ ಉಚಿತ ಆಹಾರ ಧಾನ್ಯಗಳನ್ನು ಇದರಡಿ ಒದಗಿಸಲಾಗುತ್ತಿದೆ ಎಂದಿದ್ದಾರೆ.
ಮೇ ತಿಂಗಳ ವೇಳಾಪಟ್ಟಿಯ ಪ್ರಕಾರ ಆಹಾರ ಧಾನ್ಯಗಳ ವಿತರಣೆ ನಡೆಯುತ್ತಿದೆ ಮತ್ತು ಈವರೆಗೆ 15.55 ಲಕ್ಷ ಮೆಟ್ರಿಕ್ ಟನ್ ಆಹಾರ ಧಾನ್ಯಗಳನ್ನು 34 ರಾಜ್ಯಗಳು ಮತ್ತು ಕೇಂದ್ರಾಡಳಿತಗಳು ಫುಡ್ ಕಾರ್ಪೊರೇಷನ್ ಆಫ್ ಇಂಡಿಯಾ ಡಿಪೋಗಳಿಂದ ಪಡೆದಿವೆ ಎಂದು ಪಾಂಡೆ ಮಾಹಿತಿ ನೀಡಿದ್ದಾರೆ.
ಮುಂದಿನ ತಿಂಗಳು ಅಂತ್ಯದ ವೇಳೆಗೆ ಮೇ ಮತ್ತು ಜೂನ್ ತಿಂಗಳುಗಳಿಗೆ ಪಿಎಂಜಿಕೆ -3 ಆಹಾರ ಧಾನ್ಯಗಳ ವಿತರಣೆಯನ್ನು ಪೂರ್ಣಗೊಳಿಸುವಂತೆ ಎಲ್ಲ ರಾಜ್ಯಗಳಿಗೆ ಸೂಚಿಸಲಾಗಿದೆ ಎಂದಿದ್ದಾರೆ.
32 ರಾಜ್ಯಗಳು ಮತ್ತು ಯುಟಿಗಳಲ್ಲಿ ಒನ್ ರ್ಯಾಂಕ್ ಒನ್ ಪೆನ್ಶನ್ ಅನ್ನು ಈಗ ಸಕ್ರಿಯಗೊಳಿಸಲಾಗಿದೆ ಎಂದು ಎಂದು ಪಾಂಡೆ ಮಾಹಿತಿ ನೀಡಿದ್ದಾರೆ. ಇದರ ಅಡಿಯಲ್ಲಿ ಮಾಸಿಕ ಸರಾಸರಿ 1.5 ರಿಂದ 1.6 ಕೋಟಿ ಸಾಮರ್ಥ್ಯದ ವಹಿವಾಟುಗಳನ್ನು ದಾಖಲಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಕಳೆದ ವರ್ಷ ಆಗಸ್ಟ್ನಲ್ಲಿ ಈ ಯೋಜನೆ ಪ್ರಾರಂಭವಾದಾಗಿನಿಂದ ಈ ರಾಜ್ಯಗಳು ಮತ್ತು ಯುಟಿಗಳಲ್ಲಿ 26.3 ಕೋಟಿಗೂ ಹೆಚ್ಚು ಪೋರ್ಟಬಿಲಿಟಿ ವ್ಯವಹಾರಗಳು ನಡೆದಿವೆ ಎಂದಿದ್ದಾರೆ.
ಗೋಧಿ ಖರೀದಿಯ ಕಾರಣದಿಂದ ನೇರ ಲಾಭ ವರ್ಗಾವಣೆಯ ಮೂಲಕ ಭಾರತದಾದ್ಯಂತ 49,965 ಕೋಟಿ ರೂ.ಗಳನ್ನು ನೇರವಾಗಿ ಭಾರತದಾದ್ಯಂತ ರೈತರ ಖಾತೆಗಳಿಗೆ ವರ್ಗಾಯಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.