ಬೆಂಗಳೂರು: ಕೊರೋನಾ ಸೋಂಕಿತರ ನೆರವಿಗಾಗಿ ತೆರೆಯಲಾಗಿರುವ 1912 ವಾರ್ ರೂಂ ಗೆ ತ್ವರಿತವಾಗಿ ಸ್ಪಂದನೆ ನೀಡಲು ಸಹಾಯವಾಗುವಂತೆ 40 ಮಂದಿ ವೈದ್ಯರ ತಂಡವನ್ನು ನೇಮಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ.
ಕೊರೋನಾ ಸೋಂಕಿಗೆ ತುತ್ತಾಗಿ ಬೆಂಗಳೂರು ನಲುಗುತ್ತಿದೆ. ಈ ಹಿನ್ನೆಲೆಯಲ್ಲಿ ಆರಂಭಿಸಲಾಗಿರುವ ಸಹಾಯವಾಣಿ ತಾಂತ್ರಿಕ ಸಮಸ್ಯೆಗಳನ್ನು ಎದುರಿಸುತ್ತಿದೆ. ಸಂಪರ್ಕಿತ ವಲಯದ ವಾರ್ ರೂಂ ವೇಗವನ್ನು ಉಳಿಸಿಕೊಳ್ಳಲು ಅಸಾಧ್ಯವಾಗುತ್ತಿದ್ದು, ಇವುಗಳು ಸಕಾರಾತ್ಮಕ ಫಲಿತಾಂಶಗಳನ್ನು ತೋರುವುದು ಸಾಧ್ಯವಾಗುತ್ತಿಲ್ಲ. ಈ ವಾರ್ ರೂಂಗಳನ್ನು ನವೀಕರಣಗೊಳಿಸದ ವಿನಃ ಪುನರಾರಂಭ ಮಾಡಲಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ರೋಗಿಗಳಿಗೆ ನೆರವಾಗುವ ನಿಟ್ಟಿನಲ್ಲಿ 40 ವೈದ್ಯರ ತಂಡವನ್ನು ನಿಯೋಜಿಸುವುದಾಗಿ ತಿಳಿಸಿದೆ.
ರೋಗಿಗಳಿಗೆ ಕರೆ ಮಾಡಿದ ತಕ್ಷಣವೇ ಸ್ಪಂದಿಸುವ ನಿಟ್ಟಿನಲ್ಲಿ ಈ ವ್ಯವಸ್ಥೆ ಕಲ್ಪಿಸಲಾಗಿದೆ. ಇದರಿಂದ ಸೋಂಕಿತರಿಗೆ ಹೆಚ್ಚು ಅನುಕೂಲ ಆಗಲಿದೆ ಎಂದು ಸರ್ಕಾರ ಅಭಿಪ್ರಾಯ ಪಟ್ಟಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.