ನವದೆಹಲಿ : ಕೋವಿಡ್ ಸೋಂಕಿನ ನಂತರ ಎದುರಾಗುವ ಮ್ಯೂಕರ್ ಮೈಕೋಸಿಸ್ನಿಂದ ಬಳಲುತ್ತಿರುವ ರೋಗಿಗಳಿಗೆ ವೈದ್ಯರು ಸಕ್ರಿಯವಾಗಿ ಆಂಫೋಟೆರಿಸಿನ್- ಬಿ ನೀಡಲು ಸೂಚಿಸುತ್ತಿರುವುದರಿಂದ ಕೆಲವು ರಾಜ್ಯಗಳಲ್ಲಿ ಧಿಡೀರ್ ಆ ಔಷಧಕ್ಕೆ ಬೇಡಿಕೆ ಎದುರಾಗಿರುವುದನ್ನು ಗಮನಿಸಲಾಗಿದೆ. ಆದ್ದರಿಂದ ಭಾರತ ಸರ್ಕಾರ, ಆ ಔಷಧ ಉತ್ಪಾದನೆ ಹೆಚ್ಚಳಕ್ಕೆ ಉತ್ಪಾದಕರ ಜೊತೆ ಸಮಾಲೋಚನೆಯಲ್ಲಿ ತೊಡಗಿದೆ. ಸ್ಥಳೀಯವಾಗಿ ಉತ್ಪಾದನೆ ಹೆಚ್ಚಳವಾಗುವುದಲ್ಲದೆ, ಆ ಔಷಧವನ್ನು ಹೆಚ್ಚಾಗಿ ಆಮದು ಮಾಡಿಕೊಳ್ಳುವುದರಿಂದ ಪೂರೈಕೆ ಸ್ಥಿತಿ ಸುಧಾರಿಸುವುದೆಂದು ನಿರೀಕ್ಷಿಸಲಾಗಿದೆ.
ಉತ್ಪಾದಕರು/ ಆಮದುದಾರರೊಂದಿಗೆ ದಾಸ್ತಾನು ಸ್ಥಿತಿಗತಿ ಪರಿಶೀಲನೆ ನಡೆಸಿದ ಬಳಿಕ ಮತ್ತು 2021ರ ಮೇ 11ರವರೆಗಿನ ಆಂಫೋಟೆರಿಸಿನ್- ಬಿ ಬೇಡಿಕೆ ಪ್ರವೃತ್ತಿಯನ್ನು ಗಮನಿಸಿದ ಬಳಿಕ ಫಾರ್ಮಾ ಇಲಾಖೆ ಔಷಧ ಲಭ್ಯತೆ ಪೂರೈಕೆ ಅಂದಾಜು ಆಧರಿಸಿ 2021ರ ಮೇ 10ರಿಂದ ಮೇ 31ರವರೆಗೆ ಎಲ್ಲ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ಔಷಧವನ್ನು ಹಂಚಿಕೆ ಮಾಡಿದೆ. ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಹಾಗೂ ಆರೋಗ್ಯ ರಕ್ಷಣಾ ಸಂಸ್ಥೆಗಳ ನಡುವೆ ನ್ಯಾಯಯುತವಾಗಿ ವಿತರಣೆ ಮಾಡಲು ಕಾರ್ಯತಂತ್ರವನ್ನು ಜಾರಿಗೊಳಿಸುವಂತೆ ರಾಜ್ಯ ಸರ್ಕಾರಗಳಿಗೆ ಮನವಿ ಮಾಡಲಾಗಿದೆ.
ಈ ಔಷಧ ಹಂಚಿಕೆಯಿಂದ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳು ಔಷಧವನ್ನು ಪಡೆಯಲು ‘ಪಾಯಿಂಟ್ ಆಫ್ ಕಾಂಟ್ಯಾಕ್ಟ್’ ಅನ್ನು ಸ್ಥಾಪಿಸಿ ಆ ಬಗ್ಗೆ ಪ್ರಚಾರ ಮಾಡುವಂತೆ ರಾಜ್ಯಗಳಿಗೆ ಸೂಚಿಸಲಾಗಿದೆ. ಅಲ್ಲದೆ, ಈಗಾಗಲೇ ಸರಬರಾಜು ಮಾಡಲಾದ ದಾಸ್ತಾನು ಮತ್ತು ಹಂಚಿಕೆಯಾದ ದಾಸ್ತಾನನ್ನು ನ್ಯಾಯಯುತವಾಗಿ ಬಳಸಬೇಕೆಂದು ರಾಜ್ಯಗಳಿಗೆ ವಿನಂತಿಸಲಾಗಿದೆ. ಪೂರೈಕೆಯ ವ್ಯವಸ್ಥೆಗಳ ಬಗ್ಗೆ ರಾಷ್ಟ್ರೀಯ ಫಾರ್ಮಸುಟಿಕಲ್ಸ್ ಬೆಲೆ ನಿಗದಿ ಪ್ರಾಧಿಕಾರ (ಎನ್ಪಿಪಿಎ) ನಿಗಾ ವಹಿಸಲಿದೆ.
ದೇಶ ಸದ್ಯ ಸಾಂಕ್ರಾಮಿಕದ ಗಂಭೀರ ಅಲೆಯನ್ನು ಎದುರಿಸುತ್ತಿದೆ ಮತ್ತು ಅದರಿಂದ ದೇಶದ ಹಲವು ಭಾಗಗಳು ಬಾಧಿತವಾಗಿವೆ. ಅಗತ್ಯ ಕೋವಿಡ್ ಔಷಧಿಗಳ ಪೂರೈಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮತ್ತು ಅವುಗಳನ್ನು ಪಾರದರ್ಶಕ ಮತ್ತು ನ್ಯಾಯಯುತ ರೀತಿಯಲ್ಲಿ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಲಭ್ಯವಾಗುವಂತೆ ಮಾಡುವ ನಿಟ್ಟಿನಲ್ಲಿ ಭಾರತ ಸರ್ಕಾರ ನಿರಂತರವಾಗಿ ಕಾರ್ಯೋನ್ಮುಖವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.