News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಹಳ್ಳಿಗಳಿಗೆ ಸೋಂಕು: ದೆಹಲಿಯಲ್ಲಿನ ಪ್ರತಿಭಟನೆ ನಿಲ್ಲಿಸುವಂತೆ ರೈತರಿಗೆ ಖಟ್ಟರ್ ಮನವಿ

ನವದೆಹಲಿ: ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಕೋವಿಡ್ -19 ಪರಿಸ್ಥಿತಿಯ ಭೀಕರತೆಯನ್ನು ಅರ್ಥ ಮಾಡಿಕೊಂಡು ಪ್ರತಿಭಟನೆ ಕೈಬಿಡಬೇಕು ಎಂದು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಮನವಿ ಮಾಡಿದ್ದಾರೆ.

ಸಾಂಕ್ರಾಮಿಕ ರೋಗ ಉಲ್ಬಣಗೊಂಡಿರುವ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಪ್ರತಿಭಟನೆ ಸ್ಥಗಿತಗೊಳಿಸಬೇಕು ಎಂದು ಅವರು ಕೋರಿದ್ದಾರೆ.

ಪ್ರತಿಭಟನಾ ನಿರತ ಸ್ಥಳಗಳಿಗೆ ರೈತರು ಬಂದು ಹೋಗಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಹಳ್ಳಿಗಳಲ್ಲಿ ಸೋಂಕು ಹರಡುತ್ತಿವೆ ಎಂದು ಖಟ್ಟರ್ ಹೇಳಿದ್ದಾರೆ.

ಅನೇಕ ಹಳ್ಳಿಗಳಿಂದ ಜನರು ದೆಹಲಿಗೆ ನಿಯಮಿತವಾಗಿ ಬರುತ್ತಿರುವುದರಿಂದ ಮತ್ತು ಪ್ರತಿಭಟನಾ ಸ್ಥಳಗಳಿಂದ ಹಿಂತಿರುಗುತ್ತಿರುವುದರಿಂದ ಹಳ್ಳಿಗಳು ಕೊರೋನಾ ಹಾಟ್‌ಸ್ಪಾಟ್‌ಗಳಾಗಿ ಮಾರ್ಪಡುತ್ತಿವೆ. ರೈತ ಮುಖಂಡರು ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಬೇಕು ಮತ್ತು ಪರೀಕ್ಷೆಗೆ ಮುಂದಾಗಬೇಕು ಎಂದು ಮನವಿ ಮಾಡಿದ್ದಾರೆ.

ಆದರೆ ಪ್ರತಿಭಟನಾ ನಿರತ ನಾಯಕರು ಲಸಿಕೆ ತೆಗೆದುಕೊಳ್ಳುವುದಾಗಿ ಹೇಳುತ್ತಿದ್ದಾರೆ ಆದರೆ ತಮ್ಮನ್ನು ಪರೀಕ್ಷೆಗೆ ಒಳಪಡಿಸಲು ಒಪ್ಪುತ್ತಿಲ್ಲ

ಪಾಸಿಟಿವ್ ಇರುವವರಿಗೆ ಚಿಕಿತ್ಸೆ ನೀಡಲು ಮತ್ತು ಅದಕ್ಕೆ ತಕ್ಕಂತೆ ಇತರ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಸಾಧ್ಯವಾಗುವಂತೆ ಪರೀಕ್ಷೆ ನಡೆಸಲು ಮುಂದಾಗಬೇಕೆಂದು ಖಟ್ಟರ್ ರೈತರಿಗೆ ಮನವಿ ಮಾಡಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top