ನವದೆಹಲಿ: ಪ್ರಸಕ್ತ ಹಣಕಾಸು ವರ್ಷದಲ್ಲಿ ಜಲ್ ಜೀವನ್ ಮಿಷನ್ ಅನುಷ್ಠಾನಕ್ಕಾಗಿ 15 ರಾಜ್ಯಗಳಿಗೆ 5950 ಕೋಟಿ ರೂಪಾಯಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.
ಈ ಹಣಕಾಸು ವರ್ಷದಲ್ಲಿ ಬಿಡುಗಡೆಯಾಗಬೇಕಾದ ನಾಲ್ಕು ಕಂತುಗಳಲ್ಲಿ ಇದು ಮೊದಲ ಹಂತವಾಗಿದೆ ಎಂದು ಜಲ ಶಕ್ತಿ ಸಚಿವಾಲಯ ಹೇಳಿದೆ.
ಇತರ 17 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ತಮ್ಮ ಪ್ರಸ್ತಾವನೆಗಳನ್ನು ಹಣ ಬಿಡುಗಡೆಗಾಗಿ ರಾಷ್ಟ್ರೀಯ ಜಲ ಜೀವನ್ ಮಿಷನ್ಗೆ ಕಳುಹಿಸಲು ತಿಳಿಸಲಾಗಿದೆ.
2024 ರ ವೇಳೆಗೆ ಪ್ರತಿ ಗ್ರಾಮೀಣ ಮನೆಗಳಿಗೆ ಖಚಿತವಾದ ನಲ್ಲಿ ನೀರು ಸರಬರಾಜು ಮಾಡುವ ಉದ್ದೇಶದಿಂದ ಜಲ್ ಜೀವನ್ ಮಿಷನ್ ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು 2019 ರ ಆಗಸ್ಟ್ 15 ರಂದು ಮಿಷನ್ ಘೋಷಿಸಿದರು. ಇದನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸಹಭಾಗಿತ್ವದಲ್ಲಿ ಜಾರಿಗೆ ತರಲಾಗುತ್ತಿದೆ. ಕೋವಿಡ್-19 ಸಾಂಕ್ರಾಮಿಕ ಮತ್ತು ನಂತರದ ಲಾಕ್ಡೌನ್ಗಳಿಂದಾಗಿ ಎದುರಾದ ಸವಾಲುಗಳ ನಡುವೆಯೂ ಶೇಕಡಾ 21.5 ಕ್ಕೂ ಹೆಚ್ಚು ಮನೆಗಳಿಗೆ ನಲ್ಲಿ ನೀರು ಸರಬರಾಜು ಮಾಡಲಾಗಿದೆ ಎಂದು ಜಲ ಶಕ್ತಿ ಸಚಿವಾಲಯ ಹೇಳಿದೆ.
38.5 ರಷ್ಟು ಗ್ರಾಮೀಣ ಕುಟುಂಬಗಳು ಟ್ಯಾಪ್ ಮೂಲಕ ಕುಡಿಯುವ ನೀರನ್ನು ಪಡೆಯುತ್ತಿದ್ದಾರೆ ಎಂದು ಅದು ಹೇಳಿದೆ. ಗೋವಾ, ತೆಲಂಗಾಣ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಪುದುಚೇರಿಗಳು ‘ಹರ್ ಘರ್ ಜಲ’ ರಾಜ್ಯಗಳು ಅಥವಾ ಕೇಂದ್ರಾಡಳಿತ ಪ್ರದೇಶಗಳಾಗಿ ಹೊರಹೊಮ್ಮಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.